ನವದೆಹಲಿ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರ ಒಡೆತನದ ಸಂಸ್ಥೆಗಳಿಗೆ ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆ ನೀಡಿರುವ ಬಗ್ಗೆ ಎರಡು ವಾರಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು, ಜನವರಿ 1, 2015 ರಿಂದ ಡಿಸೆಂಬರ್ 31, 2025 ರವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳು, ಗುತ್ತಿಗೆಗಳು ಮತ್ತು ಕೆಲಸದ ಆದೇಶಗಳ ಬಗ್ಗೆ ಹಾಗೂ ಕಾರ್ಯಗತಗೊಳಿಸಿದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ.
ಈ ಪ್ರಕರಣ ಬಗ್ಗೆ 16 ವಾರಗಳಲ್ಲಿ ತನ್ನ ಮುಂದೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಪೀಠ, ಸಿಬಿಐಗೆ ನಿರ್ದೇಶಿಸಿದೆ.

