HEALTH TIPS

West Bengal | ಮತದಾರರಿಗೆ ಬೆದರಿಕೆ; ತನಿಖೆಗೆ ಚುನಾವಣಾ ಆಯೋಗ ಆದೇಶ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆಗೆ ಮುನ್ನ ಡೈಮಂಡ್ ಹಾರ್ಬರ್ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ನಲ್ಲಿ ಆಗಮಿಸಿದ ವ್ಯಕ್ತಿಗಳು ಸ್ಥಳೀಯರನ್ನು ಬೆದರಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಚುನಾವಣಾ ಆಯೋಗ ಭಾನುವಾರ ತನಿಖೆಗೆ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯ ಬೆಳಕಿಗೆ ಬಂದ ಕೂಡಲೇ, ಚುನಾವಣಾ ಆಯೋಗ ಡೈಮಂಡ್ ಹಾರ್ಬರ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದೆ. ಪ್ರಕರಣ ದಾಖಲಿಸಲಾಗಿದೆ ಹಾಗೂ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್ 29ರಂದು ನಡೆಯಲಿರುವ ಪಶ್ಚಿಮಬಂಗಾಳ ವಿಧಾನ ಸಭೆಯ ಎರಡನೇ ಹಂತದ ಮತದಾನದ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಳ್ಳಲಿದೆ.

ಕ್ರಿಮಿನಲ್ ಬೆದರಿಕೆ ಹಾಗೂ ಕಾನೂನು ಬಾಹಿರ ಕೃತ್ಯಗಳನ್ನು ಹತ್ತಿಕ್ಕುವ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್ಗಳ ಅಡಿಯಲ್ಲಿ ಡೈಮಂಡ್ ಹಾರ್ಬರ್ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯಪ್ರವೃತ್ತವಾದ ರಾಜ್ಯ ಸರಕಾರ ಡೈಮಂಡ್ ಹಾರ್ಬರ್ ಪೊಲೀಸ್ ಡಿಸ್ಟ್ರಿಕ್ಟ್ನಲ್ಲಿ ನಿಯೋಜಿತರಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಮತ್ತು ''ಸರಣಿ ದುರ್ನಡತೆ'' ಹಾಗೂ ತಟಸ್ಥೆ ಕಾಪಾಡಿಕೊಳ್ಳಲು ವಿಫಲವಾದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮಗಳನ್ನು ಆರಂಭಿಸಿದ ಕೆಲವು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries