ಕಾಸರಗೋಡು: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರು, ಶ್ರೀ ದುರ್ಗೆ, ಶ್ರೀ ಆಂಜನೇಯ ಸ್ಚಾಮಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಯ ಪುನ: ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನಗೊಂಡಿತು. ಕಾರ್ಯಕ್ರಮದ ಅಂಗವಾಗಿ ಗಣಹೋಮ, ನವಾಭಿಷೇಕ, ಪಂಚಾಮೃತಾಭಿಷೇಕ ಭಜನೆ, ನಂತರ ಶ್ರೀದೇವರಿಗೆ ಶ್ರೀರಂಗ ಪೂಜೆ ನೆರವೇರಿತು.
ಕ್ಷೇತ್ರದ ಮೊಕ್ತೇಸರರು ಹಾಗೂ ತಂತ್ರಿವರ್ಯರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನೆರವೇರಿತು.


