ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ, ರಾಜೀನಾಮೆ ನೀಡದಿದ್ರೆ ಕಿತ್ತೆಸಲಾಗುವುದು ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ದೇಶ ಅವರ ಇಚ್ಚೆಯಂತೆ ನಡೆಯುವುದಿಲ್ಲ. ಅವರು ರಾಜೀನಾಮೆ ನೀಡದಿದ್ರೆ ವಜಾಗೊಳಿಸಲಾಗುತ್ತದೆ. ಒಂದು ನಿರ್ದಿಷ್ಟ ಅವಧಿಯವರೆಗೆ ರಾಜ್ಯಪಾಲರು ಕಾಯುತ್ತಾರೆ. ತದನಂತರ ಅವರನ್ನು ವಜಾಗೊಳಿಸಲಾಗುತ್ತದೆ - ಅದು ಅಷ್ಟು ಸರಳವಾಗಿದೆ" ಎಂದು ಶರ್ಮಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಫಲಿತಾಂಶ ಹೊರಬಂದಿದೆ. ಚುನಾವಣಾ ಫಲಿತಾಂಶ ಘೋಷಿಸಲಾಗಿದೆ. 100 ಸ್ಥಾನಗಳನ್ನು ನಿಮ್ಮಿಂದ ಕಸಿದುಕೊಳ್ಳಲಾಗಿದೆ ಎಂದು ಹೇಳುತ್ತಿದ್ದೀರಾ? ಹಾಗಾದರೆ, ಅಸ್ಸಾಂನಲ್ಲಿ ಕಾಂಗ್ರೆಸ್ ಗೆದ್ದ 19 ಸ್ಥಾನಗಳನ್ನು ನನ್ನಿಂದ ಕಸಿದುಕೊಳ್ಳಲಾಗಿದೆ ಎಂದು ನಾನು ಹೇಳಬಹುದು. ನನಗೂ 126 ಸಿಗಬೇಕಿತ್ತು ಎದು ಹೇಳುತ್ತೇನೆ. ಹಾಗೆ ದೇಶ ನಡೆಯಲು ಸಾಧ್ಯವಿಲ್ಲ ಎಂದರು.
ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.

