HEALTH TIPS

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ : ಜಾಗತಿಕ ಏರಿಕೆಯ ಲೆಕ್ಕಪತ್ರ ಮುಂದಿಟ್ಟ ಕೇಂದ್ರ ಸಚಿವ

ನವದೆಹಲಿ: ಜಾಗತಿಕ ಸಂಘರ್ಷ- ಬಿಕ್ಕಟ್ಟಿದ್ದರೂ ಭಾರತ ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ.20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ.3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಮೇ ಹದಿನೈದನೇ ತಾರೀಕಿನಿಂದ ಅನ್ವಯವಾಗುವಂತೆ ಪೆಟ್ರೋಲ್, ಡೀಸೆಲ್ ಮತ್ತು CNG ಬೆಲೆಯಲ್ಲಿ ಏರಿಕೆಯಾಗಿತ್ತು.

ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಇಂಧನ ಪೂರೈಕೆ ಅಡ್ಡಿ ಆತಂಕದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ನಾಗರಿಕರ ಹಿತದೃಷ್ಟಿಯಿಂದ ಕೆಲವೇ ದಿನಗಳ ಹಿಂದೆ ಅಬಕಾರಿ ಸುಂಕವನ್ನು ₹10ರಷ್ಟು ಕಡಿಮೆ ಮಾಡಿತ್ತು. ಆದರೆ, ಇದೀಗ ಬ್ರೆಂಟ್ ಕಚ್ಚಾ ತೈಲ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರುತ್ತಿದ್ದರಿಂದ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ. ಆದರೂ ವಿಶ್ವದಲ್ಲೇ ಅತ್ಯಂತ ಕನಿಷ್ಠ ಮಟ್ಟದಲ್ಲಿ ಅಂದರೆ ₹3 ಏರಿಕೆ ಮಾಡಿದೆ ಎಂದು ಜೋಶಿ ಸಮರ್ಥಿಸಿಕೊಂಡಿದ್ದಾರೆ.

ಭಾರತದಲ್ಲೇ ಅತ್ಯಂತ ಕನಿಷ್ಠ ಏರಿಕೆ ಎಂದ ಸಚಿವರು

ಜಾಗತಿಕವಾಗಿ ನೋಡಿದರೆ ತೈಲ ಬೆಲೆಯನ್ನು ಭಾರತವೇ ಆತ್ಯಂತ ಕಡಿಮೆ‌ ಮಟ್ಟದಲ್ಲಿ ಏರಿಕೆ ಮಾಡಿದೆ. ಯುಎಸ್‌ಎ +44.5%, ಶ್ರೀಲಂಕಾ +38.2%, ಯುಕೆ +19.2%, ಜರ್ಮನಿ +13.7% ರಷ್ಟು ಹೆಚ್ಚಳ ಮಾಡಿದ್ದರೆ, ತಮ್ಮ ಸರ್ಕಾರ ಭಾರತದಲ್ಲಿ‌ ಕೇವಲ +3.2% ಹೆಚ್ಚಳ ಮಾಡಿದೆ ಅಷ್ಟೇ ಎಂದು ಸಚಿವರು ಅಂಕಿ ಅಂಶ ಸಹಿತ ವಿವರಿಸಿ ಕಾಂಗ್ರೆಸ್ ಗೆ ಚಾಟಿ ಬೀಸಿದ್ದಾರೆ. ಜಗತ್ತಿನೆಲ್ಲೆಡೆ ಎಲ್ಲಾ ರಾಷ್ಟ್ರಗಳು ಇಂಧನ ಬಿಕ್ಕಟ್ಟು ಎದುರಿಸುತ್ತಿವೆ. ಇಂಧನ ಪೂರೈಕೆ ಮತ್ತು ತೈಲ ಆಮದು ಮಾಡಿಕೊಳ್ಳುವ ದೇಶಗಳಂತೂ ತೀವ್ರ ಒತ್ತಡದಲ್ಲಿವೆ. ವಾಸ್ತವ ಗೊತ್ತಿದ್ದರೂ ಈ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಮಾಡುತ್ತಿದೆ ಎಂದು ಸಚಿವರು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ಹೆಚ್ಚಿಸಿದ್ದೇಕೆ?

ಜಾಗತಿಕ ತೈಲ ಪೂರೈಕೆಯಲ್ಲಿ ಯಾವುದೇ ಅಡಚಣೆ ಇಲ್ಲದಿದ್ದರೂ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರ ಎರೆಡೆರಡು ಬಾರಿ ಇಂಧನ ತೆರಿಗೆ ಹೆಚ್ಚಿಸಿದ್ದೇಕೆ? ಎಂದು ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ 2024ರ ಜೂನ್ 15ಕ್ಕೆ ಪೆಟ್ರೋಲ್ ವ್ಯಾಟ್ ಅನ್ನು ಶೇ.25.92ರಿಂದ ಶೇ.29.84 ಮತ್ತು ಡೀಸೆಲ್ ಮೇಲೆ ಶೇ.14.34 ರಿಂದ ಶೇ.18.44ರಷ್ಟು ಹಾಗೂ ₹3 ಪ್ರತಿ ಲೀಟರ್ ಗೆ ಹೆಚ್ಚಿಸಿತ್ತು. 2025ರ ಏಪ್ರಿಲ್ 1ಕ್ಕೆ ಡೀಸೆಲ್ ವ್ಯಾಟ್ ಮತ್ತೆ ಶೇ.21.17ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಸುಮಾರು ₹91 ಲೀಟರ್‌ಗೆ ಏರಿಸಿದ್ದು, ಕೇವಲ 10 ತಿಂಗಳಲ್ಲಿ ₹5 ಹೆಚ್ಚಿಸಿದೆ. ಇದೇಕೆ? ಎಂದು ಸಚಿವ ಪ್ರಲ್ಹಾದ ಜೋಶಿ ಎದಿರೇಟು ನೀಡಿದ್ದಾರೆ.

ಕಾಂಗ್ರೆಸ್ ಬೂಟಾಟಿಕೆ ಮಾತ್ರ ಮಾಡುತ್ತಿದೆ ಎಂದ ಸಚಿವರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನಜೀವನ ದುಸ್ಥರಗೊಳಿಸಿದೆ. ಆದರೆ, ಈಗ ಕೇಂದ್ರದತ್ತ ಬೆರಳು ತೋರಿ ಪಾಠ ಮಾಡಲು ಬರುತ್ತಿದೆ. ಇದು ಬೂಟಾಟಿಕೆ ರಾಜಕಾರಣವಲ್ಲದೆ ಮತ್ತೇನೂ ಅಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ತೈಲ ಬೆಲೆ ಏರಿಕೆಯನ್ನು ದೇಶದ ಜನ ಅರ್ಥ ಮಾಡಿಕೊಳ್ಳಬಲ್ಲರು. ಅದರಂತೆ ರಾಜ್ಯ ಸರ್ಕಾರ ಸಹ ಕೇಂದ್ರದ ಅನಿವಾರ್ಯ ನಿಲುವುಗಳನ್ನು ಗೌರವಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹಿಜಾಬ್ ನಿಷೇಧ ಹಿಂದಕ್ಕೆ ಪಡೆದು ಕಾಂಗ್ರೆಸ್ ತಪ್ಪು ಮಾಡಿದೆ

ಹಿಜಾಬ್ ನಿಷೇಧ ಹಿಂಪಡೆದು ಕೇಸರಿ ಶಾಲು ನಿಷೇಧಿಸಿದೆ. ಇದಕ್ಕೆ ಪರ್ಮಿಶನ್ ಕೊಟ್ಟವರ್ಯಾರು? ಎಂದು ಸಿಎಂ ಸಿದ್ರಾಮಯ್ಯ ಅವರ ವಿರುದ್ಧ ಕೆಂಡ ಕಾರಿದ ಸಚಿವರು, ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲಿ. ದೇಶದಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ. ಹಾಗಿದ್ದರೂ ಸದಾ ಹಿಂದೂ ವಿರೋಧಿ ನಿಲುವು ತಳೆಯುತ್ತಾ ಕಾಂಗ್ರೆಸ್ ಸಂಪೂರ್ಣ ಮೂಲೆಗುಂಪಾಗುತ್ತಿದೆ. ಆದರೂ ಬುದ್ಧಿ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries