HEALTH TIPS

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಬಲವಂತದ ಗಡಿಪಾರಿನ ಆತಂಕ ಬೇಡ: ಬಾಂಗ್ಲಾದೇಶ

ಢಾಕಾ/ನವದೆಹಲಿ: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಭಾರತವು ಶಂಕಿತ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಹಿಂದಕ್ಕೆ ಕಳುಹಿಸುವ ಕ್ರಮ ಕೈಗೊಳ್ಳಬಹುದು ಎಂಬ ಆತಂಕದ ನಡುವೆ, "ಅಂತಹ ಘಟನೆ ಸಂಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಬಾಂಗ್ಲಾದೇಶದ ಗೃಹ ಸಚಿವ ಸಲಾವುದ್ದೀನ್ ಅಹ್ಮದ್ ಬುಧವಾರ ಹೇಳಿದ್ದಾರೆ.

ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಅಕ್ರಮ ವಲಸೆ ಹಾಗೂ ಗಡಿಭಾಗದ ಬಲವಂತವಾಗಿ ಗಡಿಪಾರು ಮಾಡುವ ವಿಚಾರಗಳು ಬಹುಕಾಲದಿಂದ ಸೂಕ್ಷ್ಮ ವಿಷಯಗಳಾಗಿವೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬದಲಾವಣೆಯ ನಂತರ ಇಂತಹ ಘಟನೆಗಳು ಹೆಚ್ಚಾಗುವ ಸಾಧ್ಯತೆ ಬಗ್ಗೆ ಪ್ರಶ್ನೆ ಕೇಳಲಾಗಿತ್ತು.

ಇದಕ್ಕೂ ಮೊದಲು, ಬಾಂಗ್ಲಾದೇಶದ ವಿದೇಶಾಂಗ ಸಚಿವ ಖಲೀಲುರ್ರಹಮಾನ್ ಅವರು, ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಬದಲಾವಣೆಯ ಬಳಿಕ ಭಾರತದಿಂದ ಗಡಿಪಾರು ಮಾಡುವ ಘಟನೆಗಳು ನಡೆದರೆ ಬಾಂಗ್ಲಾ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿರುವುದಾಗಿ ಆಡಳಿತಾರೂಢ ಬಿಎನ್‌ಪಿ ಪಕ್ಷದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಉಲ್ಲೇಖಿಸಲಾಗಿತ್ತು.

2024ರಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ಬಳಿಕ ಅವರು ಭಾರತದಲ್ಲೇ ಉಳಿದಿರುವುದು ಮತ್ತು ಅವರನ್ನು ಹಸ್ತಾಂತರಿಸುವಂತೆ ಬಾಂಗ್ಲಾದೇಶ ಸಲ್ಲಿಸಿರುವ ಮನವಿ ಇನ್ನೂ ಬಾಕಿ ಇರುವುದೂ ಎರಡೂ ದೇಶಗಳ ಸಂಬಂಧಗಳಲ್ಲಿ ಸೂಕ್ಷ್ಮ ವಿಚಾರವಾಗಿ ಉಳಿದಿದೆ.

ಇನ್ನೊಂದೆಡೆ, ಹೊಸದಿಲ್ಲಿಯಲ್ಲಿ ಬಾಂಗ್ಲಾದೇಶಿ ಪತ್ರಕರ್ತರ ನಿಯೋಗವನ್ನು ಭೇಟಿಯಾದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, " ಉದ್ವಿಗ್ನತೆಯ ಕಾಲಘಟ್ಟವನ್ನು ನಾವು ಎದುರಿಸಿದ್ದೇವೆ. ಈಗ ದ್ವಿಪಕ್ಷೀಯ ಸಂಬಂಧಗಳು ಮತ್ತು ಪರಸ್ಪರ ಸಂಪರ್ಕ ವ್ಯವಸ್ಥೆಗಳನ್ನು ಪುನಃ ಸಕ್ರಿಯಗೊಳಿಸಲಾಗುತ್ತಿದೆ" ಎಂದು ಹೇಳಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ವ್ಯಾಪಾರ, ಗಡಿ ನಿರ್ವಹಣೆ, ಕಾನ್ಸುಲರ್ ಸಮಸ್ಯೆಗಳು ಹಾಗೂ ಜಲ ಹಂಚಿಕೆ ಸೇರಿದಂತೆ 40ಕ್ಕೂ ಹೆಚ್ಚು ದ್ವಿಪಕ್ಷೀಯ ಕಾರ್ಯವಿಧಾನಗಳು ಜಾರಿಯಲ್ಲಿವೆ. 2011ರ ತೀಸ್ತಾ ನದಿ ನೀರು ಹಂಚಿಕೆ ಒಪ್ಪಂದ ಇನ್ನೂ ಜಾರಿಯಾಗದಿರುವುದು ಪ್ರಮುಖ ಬಾಕಿ ವಿಷಯವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries