ಕಾಸರಗೋಡು: ಮಧೂರು ಮಿತ್ರಕಲಾ ವೃಂದ (ರಿ.)ದ ಸುವರ್ಣ ಸಂಭ್ರಮ ಕಾರ್ಯಕ್ರಮದನ್ವಯ 'ಬಹುಭಾಷಾ ಕವಿ ಸಂಗಮ' ಮೇ 2ರಂದು ಬೆಳಗ್ಗೆ 10ಕ್ಕೆ ಮಧೂರು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ. ಶ್ರೀಮತಿ ಸೀತಾಲಕ್ಷ್ಮಿ ವರ್ಮ, ಸಾಹಿತಿ, ವಿಟ್ಲ ಅರಮನೆ ಸಮಾರಂಭ ಉದ್ಘಾಟಿಸುವರು. ಹಿರಿಯ ಸಾಹಿತಿ, ಶಿಕ್ಷಣ ತಜ್ಞ ವಿ.ಬಿ ಕುಳಮರ್ವ ಅಧ್ಯಕ್ಷತೆ ವಹಿಸುವರು.
ಸುಳ್ಯ ತಾಲೂಕು ಚುಟುಕು ಸಾಃಇತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಆಶಯ ನುಡಿಗಳನ್ನಾಡುವರು. ನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ
ಕಾಸರಗೋಡು ಜಿಲ್ಲೆಯ ಪ್ರಸಿದ್ಧ ಕವಿಗಳಿಂದ ಕನ್ನಡ, ತುಳು, ಮಲಯಾಳಂ, ಕೊಂಕಣಿ, ಮರಾಠಿ, ಕರಾಡ, ಹವ್ಯಕ, ಶಿವಳ್ಳಿ ತುಳು, ಸಂಸ್ಕøತ, ಇಂಗ್ಲೀಷ್, ಹಿಂದಿ ಭಾಷೆಗಳಲ್ಲಿ ಸ್ವರಚಿತ ಕವಿತಾ ವಾಚನ ನಡೆಸುವರು.


