ಉಪ್ಪಳ: ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಸಕ್ರಿಯ ಕೃಷಿಕರಿಗಾಗಿ ಹಮ್ಮಿಕೊಂಡಿರುವ ಸಾಂತ್ವನ ಯೋಜನೆಯನ್ವಯ ಬಾಯಾರು ಕ್ಯಾಂಪ್ಕೋ ಶಾಖೆಯ ಸಕ್ರಿಯ ಸದಸ್ಯರೂ ಕ್ಯಾಂಪ್ಕೋ ಸಂಸ್ಥೆಯ ಮಾಜಿ ನಿರ್ದೇಶಕ ಅಶೋಕ್ ಕುಮಾರ್ ಹೊಳ್ಳ ಕುಬಣೂರು ಅವರ ತೆರೆದ ಹೃದಯದ ಶಸ್ತ್ರಚಿಕೆತ್ಸೆಗೆ ಧನಸಹಾಯವಾಗಿ ರೂ 200000 (ಎರಡುಲಕ್ಷ)ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಯಸ್ ಆರ್ ಸತೀಶ್ಚಂದ್ರ ಅವರು ಫಲಾನುಭವಿಯ ಮನೆಗೆ ತೆರಳಿ ವಿತರಿಸಿದರು.
ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಸತೀಶ್ಚಂದ್ರ ಭಂಡಾರಿ ಕೋಳಾರು, ವೈ. ವೆಂಕಟ್ರಮಣ ಭಟ್ ಎಡಮಲೆ, ಸದಾನಂದ ಶೆಟ್ಟಿ ಕೊಮ್ಮಂಡ, ಸೌಮ್ಯಾ ಪ್ರಕಾಶ್ ಮೀಯಪದವು
ಕ್ಯಾಂಪ್ಕೋ ಬದಿಯಡ್ಕ ವಲಯದ ಪ್ರಬಂಧಕ ಚಂದ್ರ ಯಂ, ಬಾಯಾರು ಶಾಖೆಯ ಪ್ರಬಂಧಕ ರಮೇಶ್ ವೈ, ವಿಜಯಲಕ್ಷ್ಮಿ, ಸದಸ್ಯ ರಾಮಚಂದ್ರ ಮಯ್ಯ ಉಪಸ್ಥಿತರಿದ್ದರು.

.jpg)
