HEALTH TIPS

ಡಿಸಿ ಸಂದರ್ಶಿಸಿ ಅನುಭವ ಹಂಚಿ ಬೇಡಿಕೆ ಮಂಡಿಸಿದ ಶಾಲಾ ವಿದ್ಯಾರ್ಥಿಗಳು

ಕಾಸರಗೋಡು: ಶಾಲೆಯು ದೂರದ ಪ್ರದೇಶದಲ್ಲಿದ್ದು, ಸಾರಿಗೆ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ತಾಂತ್ರಿಕ ಶಾಲೆಯು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡದ ಕಾರಣ ಹಣವನ್ನು ಪಡೆಯುವಲ್ಲಿ ತೊಂದರೆ ಎದುರಿಸುತ್ತಿದೆ ಎಂದು ವಿದ್ಯಾರ್ಥಿಗಳು ಹೇಳಿದರು. ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‍ನಲ್ಲಿ ಸೇರಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸುವುದಾಗಿ ತಿಳಿಸಿದರು. 


ಮೊಗ್ರಾಲ್ ಪುತ್ತೂರು ಶಾಲಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳನ್ನು ಭೇಟಿಯಾದ ವೇಳೆ ಈ ಬೇಡಿಕೆ ಮಂಡಿಸಲಾಯಿತು.

ಶಿಥಿಲಾವಸ್ಥೆಯಲ್ಲಿರುವ ಭಗವತಿ ನಗರ-ಪೆರಿಯಡ್ಕ ರಸ್ತೆಯನ್ನು ಪುನಃಸ್ಥಾಪಿಸಲು ಮತ್ತು ಶಾಲೆಯ ಬಳಿ ಬಸ್ ನಿಲ್ದಾಣ ಮತ್ತು ಜೀಬ್ರಾ ಲೈನ್ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್‍ಗೆ ತಿಳಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಜಿಲ್ಲಾಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಸಂವಹನವನ್ನು ಬಲಪಡಿಸುವ ಮತ್ತು ಆಡಳಿತ ಪ್ರಕ್ರಿಯೆಯಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ 'ನಮಸ್ತೆ ಕಲೆಕ್ಟರ್' ಯೋಜನೆಯನ್ನು ಮಾರ್ಚ್ 18 ರಂದು ಪ್ರಾರಂಭಿಸಲಾಯಿತು. ಆಡಳಿತ ವ್ಯವಸ್ಥೆಗಳನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುವ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಜಿಲ್ಲೆಯ ಹೆಚ್ಚಿನ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ನೀವು ಜಛಿiಠಿಞsಜ@gmಚಿiಟ.ಛಿom ಇಮೇಲ್ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries