ಕಾಸರಗೋಡು: ಕೇರಳ ವಕೀಲರ ಕ್ಲರ್ಕ್ಗಳ ಸಂಘಟನೆ ಜಿಲ್ಲಾ ಸಮ್ಮೇಳನ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಸಂಘಟನೆ ರಾಜ್ಯಾಧ್ಯಕ್ಷ ವಿ. ರವೀಂದ್ರನ್ ಪೆರಾಂಬ್ರ ಸಮ್ಮೇಳನ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಎ. ರಘುನಾಥ್ ಅಧ್ಯಕ್ಷತೆ ವಹಿಸಿದ್ದರು.
ಕೆಎಸಿಎ ರಾಜ್ಯ ಸಮಿತಿ ಕಾರ್ಯದರ್ಶಿ ಪಿ. ರಾಜಮೋಹನ್, ಮುಖಂಡರಾದ ಶ್ರೀಕುಮಾರ್ ಕುನ್ನಮಂಗಲಂ, ವಿ.ಎಂ.ಜಯದೇವನ್, ಸಿ.ರವಿ, ಕೆ.ಜಯರಾಮ ಶೆಟ್ಟಿ, ವಿ.ವಿ.ಬಾಲನ್, ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಸೇವೆಯಿಂದ ನಿವೃತ್ತಿಯಾಗುತ್ತಿರುವ ಹಿರಿಯ ಸದಸ್ಯ ಕೆ.ಸೂರ್ಯ ನಾರಾಯಣ ಮಯ್ಯ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿದರು. ಜಿಲ್ಲಾ ಕಾರ್ಯದರ್ಶಿ ವಿ.ಬಾಬು ಸ್ವಾಗತಿಸಿದರು. ಜಿಲ್ಲಾ ಜಂಟಿ ಕಾರ್ಯದರ್ಶಿ ಬಿ.ಜಗದೀಶ್ ವಂದಿಸಿದರು.



