ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ ಮಹೋತ್ಸವ ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ನಡೆಯಿತು.
ಬೆಳಿಗ್ಗೆ 7 ರಿಂದ ಉಷಃಪೂಜೆ , ಗಣಹೋಮ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ಬಲಿ, ದರ್ಶನಬಲಿ, ಬಟ್ಟಲು ಕಾಣಿಕೆ ಮಂತ್ರಾಕ್ಷತೆ ಜರಗಿದವು.
ರಾತ್ರಿ ಶ್ರೀರಂಗ ಪೂಜೆ ಜರಗಿತು. ಗಿರೀಶ ಅಡಿಗ ಕರಿಚೇರಿ ಅವರಿಂದ ದೇವರ ದರ್ಶನಬಲಿ ನಡೆಯಿತು. ಪ್ರಧಾನ ಅರ್ಚಕ ಅನಂತಪದ್ಮನಾಭ ಮಯ್ಯ ವೈದಿಕ ವಿಭಾಗ ಕಾರ್ಯನಿರ್ವಹಿಸಿದರು. ಸೀತಾರಾಮ ಬಳ್ಳುಳ್ಳಾಯ ಸಮಾರಂಭ ಸಂಯೋಜಿಸಿದ್ದರು.

.jpg)
