ತಿರುವನಂತಪುರಂ: ಸಿಎಂಆರ್ಎಲ್ (ಅoಛಿhiಟಿ ಒiಟಿeಡಿಚಿಟs ಚಿಟಿಜ ಖuಣiಟe ಐಣಜ) ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಬುಧವಾರ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (Pಒಐಂ) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣವು ಸಿಎಂಆರ್ಎಲ್ ಸಂಸ್ಥೆಯಿಂದ ಪಿಣರಾಯಿ ವಿಜಯನ್ ಅವರ ಪುತ್ರಿ ಖಿ ಗಿeeಟಿಚಿ ಮಾಲೀಕತ್ವದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ (ಇxಚಿಟogiಛಿ Soಟuಣioಟಿs) ಕಂಪನಿಗೆ ನೀಡಲಾಗಿದೆ ಎನ್ನಲಾದ ₹1.72 ಕೋಟಿ ಪಾವತಿಗೆ ಸಂಬಂಧಿಸಿದ್ದಾಗಿದೆ.
2018ರಿಂದ 2019ರ ಅವಧಿಯಲ್ಲಿ ಯಾವುದೇ ಸೇವೆ ಒದಗಿಸದಿದ್ದರೂ ಸಿಎಂಆರ್ಎಲ್ ಸಂಸ್ಥೆ ಎಕ್ಸಾಲಾಜಿಕ್ ಸೊಲ್ಯೂಷನ್ಸ್ಗೆ ಅಕ್ರಮವಾಗಿ ರೂ.1.72 ಕೋಟಿ ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಆರೋಪಗಳ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಇಆ ಕ್ರಮ
ಇಡಿ ದಾಳಿ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಮರುದಿನವೇ ನಡೆದಿವೆ. ಇಡಿ ತನಿಖೆಯನ್ನು ರದ್ದುಗೊಳಿಸುವಂತೆ ಸಿಎಂಆರ್ಎಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ನ್ಯಾಯಾಲಯದ ಈ ನಿರ್ಧಾರದಿಂದ ತನಿಖೆಗೆ ಮತ್ತಷ್ಟು ವೇಗ ಸಿಕ್ಕಿದ್ದು, ಇಡಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದೆ.
2024ರಲ್ಲಿ ಇಡಿ ಪ್ರಕರಣ ದಾಖಲು
ಅಕ್ರಮ ಹಣ ವರ್ಗಾವಣೆ ಆರೋಪಗಳ ಕುರಿತು ತನಿಖೆ ನಡೆಸಲು ಜಾರಿ ನಿರ್ದೇಶನಾಲಯವು 2024ರಲ್ಲಿ ಪಿಎಂಎಲ್ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಸಿಎಂಆರ್ಎಲ್ ಹಾಗೂ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ನಡುವಿನ ಹಣಕಾಸು ವ್ಯವಹಾರಗಳ ಬಗ್ಗೆ ಇಡಿ ತನಿಖೆ ಮುಂದುವರಿಸಿದೆ.
ರಾಜಕೀಯ ವಲಯದಲ್ಲಿ ಸಂಚಲನ
ಕೇರಳದ ಪ್ರಮುಖ ರಾಜಕೀಯ ನಾಯಕ ಮತ್ತು ಸಿಪಿಐ(ಎಂ) ಹಿರಿಯ ಮುಖಂಡರಾಗಿರುವ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ ಇದೆ.

