ಉಸ್ತುವಾರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ನ್ಯಾಯಾಧೀಶ ವಿದ್ಯಾ ಪ್ರಕಾಶ್ ಅವರು ಇಬ್ಬರನ್ನೂ ಜೂನ್ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೆ 13 ಮಂದಿಯನ್ನು ಬಂಧಿಸಿದೆ.
ಸಿಬಿಐ ಪ್ರಕಾರ, ಪುಣೆಯ ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದ ಕುಲಕರ್ಣಿ ಅವರು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ಟಿಎ) ಪರವಾಗಿ ನೀಟ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು ಮತ್ತು ಪ್ರಶ್ನೆ ಪತ್ರಿಕೆಗಳನ್ನು ನೋಡಬಹುದಾಗಿತ್ತು.

