ಕಾಸರಗೋಡು: ನಗರದ ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಜರಗಿದ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾದ ದೃಢ ಕಲಶ ಸಮಾರಂಭ ಜೂ.15ರಂದು ಜರುಗಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಕಾರ್ಯದರ್ಶಿ ರಂಜಿತ್ ಮನ್ನಿಪ್ಪಾಡಿ, ಕೋಶಾಧಿಕಾರಿ ಶಾಂತ ಕುಮಾರ್ ಮುಂಡ್ಯತ್ತಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೊಹನ್ರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್, ಕೋಶಾಧಿಕಾರಿ ಪುನೀತ್ ಕೆಮ್ಮಣ್ಣು ಕ್ಷೇತ್ರದ ಮೊಕ್ತೇಸರ ಅಚ್ಚುತ ಕಾಳ್ಯಂಗಾಡು, ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು ಅರ್ಚಕರಾದ ಯೋಗೀಶ್, ಮೂಕಾಂಬಿಕಾ ಕ್ಲಬ್ ಸದಸ್ಯ ಅಭಿಲಾಷ್ ಕಾಳ್ಯಂಗಾಡು ಉಪಸ್ಥಿತರಿದ್ದರು. ದೃಢಕಲಶ ಸಮರಂಭ ವಿವಿಧ ಕಾರ್ಯಕ್ರಮಬಳೊಂದಿಗೆ ಜರುಗಲಿರುವುದು.


