HEALTH TIPS

76-80 ದಿನಗಳ ಇಂಧನ ದಾಸ್ತಾನು, ಸದ್ಯಕ್ಕೆ ಯಾವುದೇ ಆತಂಕವಿಲ್ಲ: ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ

ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರುಪೇರುಗಳನ್ನು ಎದುರಿಸಲು ಭಾರತ ಸಜ್ಜಾಗಿದೆ ಎಂದು ಹೇಳಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ದೇಶದಲ್ಲಿ 76ರಿಂದ 80 ದಿನಗಳ ಬಳಕೆಗೆ ಸಾಕಾಗುವಷ್ಟು ಇಂಧನ ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಇಂಧನ ಬೆಲೆಗಳು ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಸಿಎನ್‌ಎನ್-ನ್ಯೂಸ್18 ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುರಿ ಹೇಳಿದರು. ದೇಶಕ್ಕೆ ಸದ್ಯಕ್ಕೆ ಯಾವುದೇ ಇಂಧನ ಕೊರತೆಯ ಆತಂಕವಿಲ್ಲ ಎಂಬ ಭರವಸೆಯನ್ನೂ ಅವರು ನೀಡಿದರು.

ಇಷ್ಟೆಲ್ಲಾ ಜಾಗತಿಕ ಬಿಕ್ಕಟ್ಟುಗಳ ನಡುವೆಯೂ, ದೇಶದ ಯಾವುದೇ ಭಾಗದಲ್ಲಿ ಇಂಧನ ಖಾಲಿಯಾಗುವ ಪರಿಸ್ಥಿತಿ ಬಂದಿಲ್ಲ ಮತ್ತು ನಾವು ಇನ್ನೂ ರಫ್ತು ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದರು.

ಹಾರ್ಮುಝ್ ಜಲಸಂಧಿ ಮುಚ್ಚಲ್ಪಟ್ಟರೂ, ಭಾರತದ ಬಳಿ ಕನಿಷ್ಠ 30ರಿಂದ 60 ದಿನಗಳವರೆಗೆ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವಷ್ಟು ಆಯಕಟ್ಟಿನ ತೈಲ ದಾಸ್ತಾನು, ಸಂಸ್ಕರಣಾಗಾರಗಳ ದಾಸ್ತಾನು ಮತ್ತು ವಾಣಿಜ್ಯ ದಾಸ್ತಾನುಗಳು ಇವೆ ಎಂದು ಅವರು ಹೇಳಿದರು. ತೈಲ ಬೆಲೆಗಳು ದೀರ್ಘಕಾಲದವರೆಗೆ ಇಷ್ಟು ಗರಿಷ್ಠ ಮಟ್ಟದಲ್ಲಿ ಇರುವುದಿಲ್ಲ ಎಂದು ತಾನು ನಿರೀಕ್ಷಿಸುವುದಾಗಿಯೂ ಅವರು ನುಡಿದರು.

''ಒಂದು ವೇಳೆ ಹಾರ್ಮುಝ್ ಜಲಸಂಧಿ ಇನ್ನೂ 30 ದಿನಗಳ ಕಾಲ ಮುಚ್ಚಲ್ಪಟ್ಟರೆ ಏನಾಗುತ್ತದೆ? ನಮ್ಮಲ್ಲಿ 60 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ, ನೈಸರ್ಗಿಕ ಅನಿಲ ಮತ್ತು ಎಲ್‌ಪಿಜಿ ದಾಸ್ತಾನು ಇರಬೇಕು ಎನ್ನುವುದು ಸಾಮಾನ್ಯ ಪರಿಸ್ಥಿತಿಯಲ್ಲಿ ನನ್ನ ನೀತಿಯಾಗಿದೆ. ಈಗ ಅಷ್ಟು ಪ್ರಮಾಣದ ದಾಸ್ತಾನು ಇದೆ. ಹಾಗಾಗಿ ಪರಿಸ್ಥಿತಿ ಉತ್ತಮವಾಗಿದೆ ಎಂದು ನಾನು ಹೇಳುತ್ತೇನೆ'' ಎಂದು ಪುರಿ ನುಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries