HEALTH TIPS

ಆಂಧ್ರಪ್ರದೇಶ | ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಬೆಂಕಿ: 8 ಮಂದಿ ಸಾವು

ಹೈದರಾಬಾದ್‌: ಆಂಧ್ರ ಪ್ರದೇಶದ ಅನಕ‍ಪಲ್ಲೆ ಜಿಲ್ಲೆಯ ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ (ವಿಎಸ್‌ಪಿ) ಸೋಮವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಉಕ್ಕನ್ನು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ಕೊಳಗದಿಂದ ದ್ರವ ರೂಪದ ಲೋಹ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನೆ ನಡೆದಾಗ 20 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಈ ಪೈಕಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 8 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವವರು ಕಾರ್ಖಾನೆಯ ಕಾರ್ಮಿಕರೋ, ಹೊರಗುತ್ತಿಗೆ ನೌಕರರೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆ ತಿಳಿಸಿದೆ. ಅವಘಡಕ್ಕೆ ನಿಜವಾದ ಕಾರಣ ಪತ್ತೆಹಚ್ಚಲು ಸೂಕ್ತ ತನಿಖೆ ನಡೆಸಬೇಕೆಂದೂ ಆಗ್ರಹಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries