ನವದೆಹಲಿ (PTI): ನೈರುತ್ಯ ಮುಂಗಾರು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ನೈರುತ್ಯ ಮುಂಗಾರು ಜೂನ್ 1ರ ಆಸುಪಾಸಿನಲ್ಲಿ ಆರಂಭವಾಗುತ್ತದೆ.
ಅರಬ್ಬೀ ಸಮುದ್ರ, ಲಕ್ಷದ್ವೀಪ , ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ಎರಡು-ಮೂರು ದಿನಗಳಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಬಹುದು ಎಂದು ಈ ಹಿಂದೆ ಐಎಂಡಿ ಮುನ್ಸೂಚನೆ ನೀಡಿತ್ತು. ಎಲ್ ನಿನೊ ಪ್ರಭಾವದಿಂದಾಗಿ ನೈರುತ್ಯ ಮುಂಗಾರು ಮಳೆ ವಾಡಿಕೆಗಿಂತಲೂ ಕಡಿಮೆ ಇರಲಿದೆ ಎಂದು ಕಳೆದ ವಾರ ಹೇಳಿತ್ತು.
ಜೂನ್ನಲ್ಲಿ ಎಲ್ ನಿನೊ ಪ್ರಭಾವ ದುರ್ಬಲವಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ನಲ್ಲಿ ಪ್ರಬಲವಾಗಬಹುದು ಎಂದು ಐಎಂಡಿ ಅಂದಾಜಿಸಿದೆ.

