HEALTH TIPS

ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ನೇತೃತ್ವ

ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಪರಂಪರೆಯನ್ನು ರಾಜ್ಯ ಅಂತರ ರಾಜ್ಯದಾದ್ಯಂತ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸಿ ಪೆÇ್ರೀತ್ಸಾಹಿಸುವ ಉದ್ದೇಶದಿಂದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ 1990 ರಲ್ಲಿ ಸ್ಥಾಪನೆಗೊಂಡಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ಆಶ್ರಯದಲ್ಲಿ ಸಾಂಸ್ಕೃತಿಕ ವಿನಿಮಯಕ್ಕಾಗಿ ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8ರಂದು ಹಮ್ಮಿಕೊಳ್ಳಲಾಗಿದೆ.  


ಇದೇ ಸಂದರ್ಭ ಕೇರಳ- ಕರ್ನಾಟಕ ಭವನ ಸಾಂಸ್ಕೃತಿಕ ಸಮುಚ್ಚಯದ ಶಿಲಾನ್ಯಾಸ ನಡೆಯಲಿರುವುದು. ಇದರ ಪೂರ್ವಭಾವಿಯಾಗಿ ದೇಶ ವಿದೇಶಗಳಲ್ಲಿ ಕನ್ನಡ ಯಾತ್ರೆಯ ಮೂಲಕ ಪ್ರಚಾರ ಪಡಿಸಲು ಉದ್ದೇಶಿಸಲಾಗಿದೆ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ನೇತೃತ್ವದಲ್ಲಿ ಕಾಸರಗೋಡಿನ ವಿವಿಧ ಕನ್ನಡ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ಸಾಂಸ್ಕೃತಿಕ ನಿಯೋಗವೊಂದು  ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರಪ್ಪ ಬೆಲ್ಲದ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರದ ಸೋಲಾಪುರದ ಹುತಾತ್ಮ ಸ್ಮೃತಿ  ಮಂದಿರದಲ್ಲಿ ಜೂನ್ 20 ಮತ್ತು 21ರಂದು ನಡೆಯಲಿರುವ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10 ನೇ ಮಹಾಮೇಳಕ್ಕೆ ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆ ಆಯೋಜಿಸಲಾಗಿದೆ.  

ಕಾಸರಗೋಡಿನ ವಿವಿಧ ಕನ್ನಡ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ಸಾಂಸ್ಕೃತಿಕ ನಿಯೋಗದಲ್ಲಿ ಶಿವರಾಮ ಕಾಸರಗೋಡು,ಕೆ. ಜಗದೀಶ ಕೂಡ್ಲು,ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೆ. ಗುರುಪ್ರಸಾದ ಕೋಟೆಕಣಿ, ದಿವಾಕರ ಪಿ ಅಶೋಕನಗರ, ಶ್ರೀಕಾಂತ ಕಾಸರಗೋಡು, ಕಿರಣ್ ಕಲಾಂಜಲಿ, ಕುಶಲಕುಮಾರ್ ಕೆ. ಹಾಜಿ ಎಸ್ ಅಬೂಬಕ್ಕರ್ ಆರ್ಲಪದವು,  ಸಾಗರ್ ಕಾಸರಗೋಡು ಭಾಗವಹಿಸಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries