HEALTH TIPS

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯನ್ನು ಭೇಟಿಯಾದ ಪವನ್ ಕಲ್ಯಾಣ್

 ಅಮರಾವತಿ: ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್‌ ಭೇಟಿಯಾಗಿದ್ದಾರೆ. 


ನಿರಂಜನ್ ಎನ್ನುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಲು ಪವನ್ ಅವರು ಹನುಮಕೊಂಡಕ್ಕೆ ತೆರಳಿದ್ದರು. ನಿರಂಜನ್ ಮತ್ತು ಅವರ ಕುಟುಂಬದೊಂದಿಗೆ ಮಾತುಕತೆ ನಡೆಸಿ, ಚಿಕಿತ್ಸೆಯ ಬಗ್ಗೆ ವಿಚಾರಿಸಿ, ವೈದ್ಯಕೀಯ ವೆಚ್ಚಕ್ಕಾಗಿ ₹1 ಲಕ್ಷ ಆರ್ಥಿಕ ಸಹಾಯ ಮಾಡಿದ್ದಾರೆ.

ಜತೆಗೆ 'ಇಂತಹ ಸಮಯದಲ್ಲಿ ಧೈರ್ಯದಿಂದ ಇರಬೇಕು' ಎಂದಿದ್ದಾರೆ.

ಇತ್ತೀಚಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್, ನಿರಂಜನ್‌ ಬೇಗ ಗುಣಮುಖವಾಗುವಂತೆ ಅವರ ಹೆಸರಿನಲ್ಲಿ ಪೂಜೆ ಮಾಡಿಸಿದ್ದರು. ಅದರ ಪ್ರಸಾದವನ್ನೂ ಬಾಲಕನಿಗೆ ನೀಡಿದ್ದಾರೆ.

ಭೇಟಿಯ ವೇಳೆ ನಿರಂಜನ್‌ ಅವರು ಪವನ್ ಕಲ್ಯಾಣ್ ಬಳಿ, 'ನಾನು ನಿಮ್ಮ ದೊಡ್ಡ ಅಭಿಮಾನಿ' ಎಂದು, ಅವರಿಂದ ಪ್ರೇರಿತನಾಗಿ ಮಾಡಿದ್ದ ಡ್ಯಾನ್ಸ್‌ ವಿಡಿಯೊಗಳನ್ನೂ ತೋರಿಸಿ ಖುಷಿ ಪಟ್ಟಿದ್ದಾರೆ.

ಪವನ್ ಕಲ್ಯಾಣ್ ಅವರ ಈ ನಡೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries