HEALTH TIPS

ಮಂಗಲ್ಪಾಡಿ ಪಂ. ವ್ಯಾಪ್ತಿಯ ವಿವಿಧ ಕಡೆ ಕಡಲ್ಕೊರೆತ ಭೀತಿ: ಕಳೆದ ವರ್ಷ ಸಮುದ್ರಪಾಲಾದ ರಸ್ತೆ ಇನ್ನೂ ದುರಸ್ತಿ ಬಾಕಿ


ಉಪ್ಪಳ
: ಮಳೆಗಾಲ ಆರಂಭಗೊಳ್ಳುತ್ತಿದ್ದಂತೆ ಕಡಲ್ಕೊರೆತದ ಭೀತಿ ತೀರ ಪ್ರದೇಶದ ಜನರನ್ನು ಕಾಡುತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಕಳೆದ ವರ್ಷ ಮಳೆಗಾಲದ ಸಂದರ್ಭದಲ್ಲಿ ಮಂಗಲ್ಪಾಡಿ ಪಂಚಾಯತಿ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಕಡಲ್ಕೊರೆತ ಉಂಟಾಗಿ ಸಮುದ್ರ ತೀರ ಪ್ರದೇಶದ ರಸ್ತೆಗಳು ಸಮುದ್ರ ಪಾಲಾಗಿತ್ತು. ಆದರೆ ಇದುವರೆಗೂ ರಸ್ತೆ ನಿರ್ಮಿಸದೆ ಇರುವುದರಿಂದ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. 

ಪಂಚಾಯತಿಯ ಹನುಮಾನ್‍ನಗರ, ಶಿವಾಜಿನಗರ, ಕುದುಪುಳು, ಬಂಗ್ಲ, ಪೆರಿಂಗಡಿ, ಬೇರಿಕೆ ಸಹಿತ ವಿವಿಧ ಭಾಗಗಳಲ್ಲಿ ರಸ್ತೆಗಳು ಹಾನಿಗೊಂಡು ಸ್ಥಳೀಯ ಮೀನು ಕಾರ್ಮಿಕ ಕುಟುಂಬಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ದೂರಲಾಗಿದೆ. ಅಡುಗೆ ಅನಿಲ, ರೋಗಿಗಳನ್ನು ಕೊಂಡೊಯ್ಯಲು ಇನ್ನಿತರ ಅತ್ಯಗತ್ಯಕ್ಕೆ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿರುವುದಾಗಿ ದೂರಲಾಗಿದೆ. ವ್ಯವಸ್ಥಿತ ರಸ್ತೆ ಹಾಗೂ ತಡೆಗೋಡೆಗಳನ್ನು ನಿರ್ಮಿಸಲು ಊರವರು ವಿವಿಧ ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಯಾವುದೇ ಕ್ರಮವಿಲ್ಲವೆಂದು ಊರವರು ತಿಳಿಸಿದ್ದಾರೆ. ಈಗಾಗಲೇ ಮಳೆಗಾಲ ಆರಂಭಗೊಂಡಿದ್ದು, ಕಡಲ್ಕೊರೆತದ ಭೀತಿ ಉಂಟಾಗಿದೆ. ಮಣಿಮುಂಡ, ಹನುಮಾನ್‍ನಗರ, ಶಾರದಾನಗರ, ಪೆರಿಂಗಡಿ ಸಹಿತ ವಿವಿಧ ಪ್ರದೇಶಗಳಲ್ಲಿ ಹಲವಾರು ಮನೆಗಳು ಅಪಾಯದಂಚಿನಲ್ಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries