ಕಾಸರಗೋಡು: ನೀಟ್ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರ ಪ್ರತಿಭಟಿಸಿ ಕಾಸರಗೋಡು ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನಾ ಮಾರ್ಚ್ ನಡೆಸಿದ 20ಮಂದಿ ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಕೆ.ಪಿ. ಸೈನಾಬಿ, ಜಿಲ್ಲಾಧ್ಯಕ್ಷ ಅದಿನಾನ್, ಅನುಷಾಜ್, ಅನಂತು ಮೋಹನನ್, ಅಬ್ದುಲ್ ಶೈಖಾರ್, ದಿಬಿನ್ ಸೇರಿದಂತೆ ಸುಮಾರು 20 ಮಂದಿಗೆ ಕೇಸು.
ಎಸ್ಎಫ್ಐ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ರಸ್ತೆ ತಡೆ, ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ಅಡಚಣೆ ಸೃಷ್ಟಿಸಿದ ಆರೋಪದನ್ವಯ ಈ ಪ್ರಕರಣ ದಾಖಲಾಗಿದೆ.

