ಕಾಸರಗೋಡು: ರಾಜ್ಯ ಗ್ರಂಥಾಲಯ ಸ್ಥಾಪಕಾಧ್ಯಕ್ಷ ಪಿ.ಎನ್ ಪಣಿಕ್ಕರ್ ಸಮಾಜದಲ್ಲಿ ಕ್ರಾಂತಿಕಾರಿ ಬೆಳವಣಿಗೆಗೆ ಕಾರಣರಾಗಿದ್ದ ಮಹಾನ್ ಚೇತನ ಆಗಿದ್ದರು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ತಿಳಿಸಿದ್ದಾರೆ. ಅವರು ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಮಾಹಿತಿ ಇಲಾಖೆ ಜಂಟಿ ಆಶ್ರಯದಲ್ಲಿ ಚೆರ್ಕಳ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಾಚನಾ ವಾರಾಚರಣೆ ಜಿಲ್ಲಾ ಮಟ್ಟದ ಉದ್ಘಾಟನೆ ಮತ್ತು ಪಿ.ಎನ್. ಪಣಿಕ್ಕರ್ ಸಂಸ್ಮರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಓದುವ ಮೂಲಕ ಬೆಳೆಯಿರಿ, ಯೋಚಿಸಿ ಮತ್ತು ಬುದ್ಧಿಶಕ್ತಿ ಪಡೆಯಿರಿ' ಎಂಬ ತತ್ವವನ್ನು ಕೇಂದ್ರೀಕರಿಸಿ, ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಾರಂಭಿಸುವಲ್ಲಿ ಪಿ.ಎನ್ ಪಣಿಕ್ಕರ್ ಮಹತ್ವದ ಪಾತ್ರವಹಿಸಿದ್ದರು. ಓದುವುದು ಜೀವನದ ಒಂದು ಅಂಗವಾಗಬೇಕು ಮತ್ತು ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಿದ್ದರು ಎಂದು ತಿಳಿಸಿದರು. ಎಂದು ಅವರು ನಂಬಿದ್ದರು.
ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ವಾಚನಾ ದಿನದ ಸಂದೇಶ ನೀಡಿದರು. ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಅಜಕ್ಕೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಅಬ್ದುಲ್ಲಕುಞÂ ಚೆರ್ಕಳ ಮುಖ್ಯ ಅತಿಥಿಯಾಗಿದ್ದರು.
ಸಮಾರಂಭದಲ್ಲಿ, 'ಒಬ್ಬ ಶಿಕ್ಷಕ ಒಂದು ಪುಸ್ತಕ' ಕಾರ್ಯಕ್ರಮದ ಮೂಲಕ ಸಂಗ್ರಹಿಸಲಾದ ಪುಸ್ತಕಗಳನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮಕ್ಕಳಿಗೆ ವಿತರಿಸಿದರು. ಕಳೆದ ಐದು ವರ್ಷಗಳಿಂದ ಚೆರ್ಕಳ ಶಾಲೆಯಲ್ಲಿ ನಡೆಯುತ್ತಿರುವ ಮೆಗಾ ರಸಪ್ರಶ್ನೆಯ ಈ ವರ್ಷದ ಓದುವ ದಿನದ ಲಾಂಛನವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು. ಜಿಲ್ಲಾ ಮಾಹಿತಿ ಕಚೇರಿಯಿಂದ ಶಾಲಾ ಗ್ರಂಥಾಲಯಕ್ಕೆ ಒದಗಿಸಲಾದ ಪುಸ್ತಕಗಳನ್ನು ಜಿಪಂ ಅಧ್ಯಕ್ಷ ಸಾಬು ಅಬ್ರಹಾಂ ಶಾಲಾ ಮುಖ್ಯ ಶಿಕ್ಷಕಿಗೆ ಹಸ್ತಾಂತರಿಸಿದರು.
ಡಾ. ಸಂತೋಷ್ ಪನಯಾಲ್ ಸಾಂಸ್ಕøತಿಕ ಉಪನ್ಯಾಸ ನೀಡಿದರು. ಪಿ.ಎನ್. ಪಣಿಕರ್ ಫೌಂಡೇಶನ್ ಅಧ್ಯಕ್ಷ ಪೆÇ್ರಫೆಸರ್ ಕೆ.ಪಿ. ಜಯರಾಜನ್ ಪಿ.ಎನ್. ಪಣಿಕರ್ ಸ್ಮಾರಕ ಉಪನ್ಯಾಸ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸಿ.ವಿ. ಸುಬೈದಾ ಓದುವ ದಿನದ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಜಸ್ನಾ ಮನಾಫ್ ಸೇರಿದಂತೆ ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



