HEALTH TIPS

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಚುನಾವಣಾ ಆಯೋಗ ಕಚೇರಿ ಎದುರು ಕಾಂಗ್ರೆಸ್ ಧರಣಿ

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಮಂಗಳವಾರ ಇಲ್ಲಿನ ಚುನಾವಣಾ ಆಯೋಗದ ಕಚೇರಿ ಎದುರು ಧರಣಿ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್, ಸಚಿನ್ ಪೈಲಟ್, ಭೂಪೇಶ್ ಬಘೇಲ್ ಸೇರಿದಂತೆ ಹಲವು ನಾಯಕರು ಈ ವಿಚಾರವಾಗಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಕಚೇರಿಗೆ ತೆರಳಿದ್ದರು. ಆದರೆ, ಪೂರ್ವಾನುಮತಿ ಇಲ್ಲ ಎಂಬ ಕಾರಣ ನೀಡಿ ಅವರಿಗೆ ಕಚೇರಿಯೊಳಗೆ ಪ್ರವೇಶ ನೀಡಲಿಲ್ಲ ಎಂದು ತಿಳಿಸಲಾಯಿತು.

ಇದರಿಂದ ಆಕ್ರೋಶಗೊಂಡ ನಾಯಕರು ಚುನಾವಣಾ ಆಯೋಗದ ಕಚೇರಿ ಎದುರು ಧರಣಿ ನಡೆಸಿದರು. ಬಳಿಕ, ಬುಧವಾರ ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ನಿಯೋಗವನ್ನು ಭೇಟಿ ಮಾಡಲು ಚುನಾವಣಾ ಆಯೋಗ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ ಎಂದು ವಿಧಾನಸಭೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮೂರನೇ ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಮಹೇಶ್ ಕೆವಾಟ್, ನಟರಾಜನ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ನಾಮಪತ್ರವನ್ನು ಪರಿಶೀಲಿಸಿದ ಚುನಾವಣಾಧಿಕಾರಿ ಅದನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries