HEALTH TIPS

ಪಶ್ಚಿಮ ಬಂಗಾಳ | ನೇಮಕಾತಿ ಹಗರಣ ಪ್ರಕರಣ : TMC ಶಾಸಕನಿಗೆ ಸೇರಿದ ಸ್ಥಳಗಳ ಮೇಲೆ ED ದಾಳಿ

ಕೋಲ್ಕತ್ತ: ಜಾರಿ ನಿರ್ದೇಶನಾಲಯವು (ಈ.ಡಿ.) ಮುನ್ಸಿಪಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಶನಿವಾರ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಮಿತ್ರಾ ಅವರಿಗೆ ಸೇರಿದ ಏಳು ಸ್ಥಳಗಳಲ್ಲಿ ಸಂಸ್ಥೆಯು ದಾಳಿಗಳನ್ನು ನಡೆಸಿದೆ. ಅವರು ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳ ಜಿಲ್ಲೆಯ ಕಮರಹಟಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಕಮರಹಟಿ ಸೇರಿದಂತೆ ವಿವಿಧ ನಗರಸಭೆಗಳಲ್ಲಿಯ ಹುದ್ದೆಗಳಿಗೆ ನೇಮಕಾತಿಗಾಗಿ ಮಿತ್ರಾ ಅವರು ಮಧ್ಯವರ್ತಿಗಳ ಮೂಲಕ ನಗದು ಮತ್ತು ಚಿನ್ನದ ರೂಪದಲ್ಲಿ ಲಂಚ ಪಡೆದಿದ್ದರು ಎಂದು ಅಪರಿಚಿತ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಮಿತ್ರಾ ಅವರು ಇಂತಹ 125 ಅಕ್ರಮ ನೇಮಕಾತಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries