ತಿರುವನಂತಪುರಂ: ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ವೀಕ್ಷಣಾಲಯ ತಿಳಿಸಿದೆ. ಶುಕ್ರವಾರ ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಮೂರು ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ನೀಡಲಾಗಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಶುಕ್ರವಾರ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಇಡುಕ್ಕಿ, ಎರ್ನಾಕುಳಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ಶನಿವಾರ ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಗುಜರಾತ್ ಕರಾವಳಿಯಿಂದ ಉತ್ತರ ಕೇರಳ ಕರಾವಳಿಯವರೆಗೆ ಕರಾವಳಿ ಕಡಿಮೆ ಒತ್ತಡದ ಪ್ರದೇಶವಿದೆ. ಗುರುವಾರದಿಂದ ಆಗಸ್ಟ್ 1 ರವರೆಗೆ ಕೇರಳದ ಬಹುತೇಕೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

