HEALTH TIPS

ಚಿಗುರುಪಾದೆಯಲ್ಲಿ ಯಕ್ಷಚಿಗುರು -2026 ಆಮಂತ್ರಣ ಪತ್ರಿಕೆ ಬಿಡುಗಡೆ


ಮಂಜೇಶ್ವರ
: ಮೀಯಪದವು ಶ್ರೀಗುರುನರಸಿಂಹ ಯಕ್ಷಬಳಗ ಕಲಾಸಂಸ್ಥೆಯು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಚಿಗುರುಪಾದೆ ದೇಗುಲದ ಸಹಯೋಗದೊಂದಿಗೆ ಶ್ರೀಕ್ಷೇತ್ರದ ವಠಾರದಲ್ಲಿ ಆ. 8 ರ ಶನಿವಾರ ಯಕ್ಷಚಿಗುರು -2026 ಸಮಾರಂಭವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಂಡಿದೆ. ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಅರ್ಚಕ ಬಾಲಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು.

ಕ್ಷೇತ್ರದ ಆಡಳಿತ ಮೊಕ್ತೇಸರ ವಸಂತ ಭಟ್ ತೊಟ್ಟೆತ್ತೋಡಿ, ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್  ಅಧ್ಯಕ್ಷ ಡಾ.ಜಯಪ್ರಕಾಶನಾರಾಯಣ ತೊಟ್ಟೆತ್ತೋಡಿ, ಗುರುನರಸಿಂಹ ಯಕ್ಷಬಳಗ ಮೀಯಪದವು ಸಂಸ್ಥೆಯ ಅಧ್ಯಕ್ಷ ವೇದಮೂರ್ತಿ ಗಣೇಶ ನಾವಡ ಮೀಯಪದವು, ರಾಜಾರಾಮ ರಾವ್ ಮೀಯಪದವು, ಸದಾಶಿವ ರಾವ್ ಟಿ.ಡಿ. ಚಿಗುರುಪಾದೆ, ಪುಷ್ಪರಾಜ ಶೆಟ್ಟಿ ತಲೇಕಳ, ಹರೀಶ ನಾವಡ ಮಜಿಬೈಲು, ಗೌತಮ ನಾವಡ ಮಜಿಬೈಲು, ಯೋಗೀಶ ರಾವ್ ಚಿಗುರುಪಾದೆ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries