ಕಾಸರಗೋಡು: 3.800 ಕೆಜಿ ಗಾಂಜಾವನ್ನು ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಮಂಜೇಶ್ವರ ಮೀಂಜ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿನ್ಸೆಂಟ್ ಡಿಸೋಜಾ (38) ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದ್ದು, ಶಿಕ್ಷೆ ವಿಧಿಸಲಾಗಿದೆ. ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮು ರಮೇಶ್ ಚಂದ್ರಭಾನು ಅವರು ಆರೋಪಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿದರು.
ಪ್ರಕರಣ 2020ರ ಜೂನ್ 15 ರಂದು ನಡೆದಿತ್ತು. ಮಂಜೇಶ್ವರ ಪೆÇಲೀಸರು ಆತನ ಮನೆಯಲ್ಲಿ ನಡೆಸಿದ ಶೋಧದ ಸಮಯದಲ್ಲಿ ಆರೋಪಿಯನ್ನು ಬಂಧಿಸಲಾಯಿತು. ಶೋಧದ ಸಮಯದಲ್ಲಿ, ಅಧಿಕಾರಿಗಳು ಆತನ ಮನೆಯ ಹಾಸಿಗೆಯ ಕೆಳಗೆ ಬಚ್ಚಿಟ್ಟಿದ್ದ 3,800 ಕೆಜಿ ಗಾಂಜಾವನ್ನು ಪತ್ತೆ ಮಾಡಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಮಾದಕವಸ್ತು ಮಾಫಿಯಾ ತಂಡಗಳು ಬೀಡುಬಿಟ್ಟಿವೆ ಎಂಬ ಮಾಹಿತಿಯ ಆಧಾರದ ಮೇಲೆ ಪೋಲೀಸರು ಶೋಧವನ್ನು ತೀವ್ರಗೊಳಿಸುತ್ತಿದ್ದ ಸಮಯದಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.
ಆರೋಪಿ ದಂಡ ಪಾವತಿಸಲು ವಿಫಲವಾದರೆ, ಅವರು ಹೆಚ್ಚುವರಿಯಾಗಿ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಹೆಚ್ಚುವರಿ ಸರ್ಕಾರಿ ವಕೀಲ ಜಿ. ಚಂದ್ರಮೋಹನ್ ಮತ್ತು ವಕೀಲೆ ಚಿತ್ರಕಲಾ ಅವರು ಪ್ರಾಸಿಕ್ಯೂಷನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದರು. ಪೋಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಸಾಕ್ಷ್ಯ ಮತ್ತು ಸಾಕ್ಷಿ ಹೇಳಿಕೆಗಳು ಪ್ರಕರಣದಲ್ಲಿ ನಿರ್ಣಾಯಕವಾದವು.

.jpg)
.jpg)
