HEALTH TIPS

ವಿಶ್ವ ಒ.ಆರ್.ಎಸ್. ದಿನ: ಜಿಲ್ಲಾ ಮಟ್ಟದ ಉದ್ಘಾಟನೆ

ಕಾಸರಗೋಡು: ಜುಲೈ 29 ರಂದು ನಡೆದ ವಿಶ್ವ ಒ.ಆರ್.ಎಸ್ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಅಜಾನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ವಿ.ವಿ. ತುಳಸಿ ಅವರು ಅಜಾನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮೂಲಕಂಡಂ ಪ್ರಭಾಕರನ್ ವಹಿಸಿದ್ದರು. ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಕೆ.ಟಿ. ರೇಖಾ ಅವರು ದಿನಾಚರಣೆಯ ಸಂದೇಶ ನೀಡಿದರು. ಕಾಞಂಗಾಡ್ ಬ್ಲಾಕ್ ಪಂಚಾಯತಿ ಸದಸ್ಯೆ ಕೆ.ಬಿಂದು, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ. ರಾಘವನ್, ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಡಾ. ಧನ್ಯಾ ದಯಾನಂದನ್, ತಾಂತ್ರಿಕ ಸಹಾಯಕ ಎಂ. ಚಂದ್ರನ್, ಅಜಾನೂರು ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್. ಅನಿಲ್ ಕುಮಾರ್ ಮತ್ತು ಆನಂದಾಶ್ರಮ ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಸಿ. ಧನೇಶ್ ಮಾತನಾಡಿದರು. ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿ, ಪೆರಿಯ ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಬಿಜು ಬಾಲುಸ್ಸೇರಿ ವಂದಿಸಿದರು. ಕಾಸರಗೋಡು ಜಿಲ್ಲಾ ವೈದ್ಯಕೀಯ ಕಚೇರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಐಎಪಿ ಕಾಞಂಗಾಡ್ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಅತಿಸಾರ ಚಿಕಿತ್ಸೆಯಲ್ಲಿ ಓಆರ್‍ಎಸ್‍ನ ಮಹತ್ವ, ಓಆರ್‍ಎಸ್ ಅನ್ನು ಹೇಗೆ ತಯಾರಿಸುವುದು, ಅತಿಸಾರ ತಡೆಗಟ್ಟುವಲ್ಲಿ ಆಹಾರ, ಪಾನೀಯ ಮತ್ತು ವೈಯಕ್ತಿಕ ನೈರ್ಮಲ್ಯದ ಮಹತ್ವ ಮತ್ತು ನಿರ್ಜಲೀಕರಣದ ಅಪಾಯಗಳು ಮುಂತಾದ ವಿವಿಧ ವಿಷಯಗಳ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಭಾಗವಾಗಿ ನಡೆದ ಜಾಗೃತಿ ವಿಚಾರ ಸಂಕಿರಣದಲ್ಲಿ, ಕಾಞಂಗಾಡ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಬಿಬಿನ್ ಕೆ. ನಾಯರ್ ಮತ್ತು ಜಿಲ್ಲಾ ಎಂಸಿಎಚ್ ಅಧಿಕಾರಿ ಸ್ಟೆಲ್ಲಾ ಜೋಸೆಫ್ ಪ್ರಸ್ತುತಿಗಳನ್ನು ನೀಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries