ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ 6ನೇ ವರ್ಷದ ಎರಡು ತಿಂಗಳ ಕಾಲ ನಡೆಯಲಿರುವ ಚಾತುರ್ಮಾಸ್ಯ ವ್ರತಾಚರಣೆ ಗುರು ಪೌರ್ಣಮಿಯ ಶುಭ ದಿನವಾದ ಬುಧವಾರ ಶ್ರೀಮದ್. ಎಡನೀರು ಮಠದಲ್ಲಿ ಸಾಂಪ್ರದಾಯಿಕ ಶ್ರದ್ಧಾಭಕ್ತಿಗಳೊಂದಿಗೆ ಆರಂಭಗೊಂಡಿತು.
ಬೆಳಿಗ್ಗೆ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತ ಸಂಕಲ್ಪ, ಹೋಮಗಳ ಪೂರ್ಣಾಹುತಿ ನಡೆಯಿತು. ಬಳಿಕ 60 ದಿನಗಳ ಭಜನಾ ಕಾರ್ಯಕ್ರಮಕ್ಕೆ ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿ ಎಡನೀರು ಇವರಿಂದ ಭಜನೆಗೆ ಚಾಲನೆ ನೀಡಲಾಯಿತು. ಸೆ. 26ರ ವರೆಗೆ ಚಾತುರ್ಮಾಸ್ಯ ವ್ರತಾಚರಣೆ ಜರಗಲಿದೆ.

.jpg)
.jpg)
.jpg)
.jpg)
