HEALTH TIPS

ಎಂ.ಎಸ್.ಎಂ.ಇ. ಉದ್ಯಮಿಗಳ ಸಭೆ

ಕಾಸರಗೋಡು: ಜಿಲ್ಲೆಯ ಎಂ.ಎಸ್.ಎಂ.ಇ. ಉದ್ಯಮಿಗಳಿಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಾಜ್ಯ ಶಾಖೆಯ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು. ಎಂ.ಎಸ್.ಎಂ.ಇ. ಉದ್ಯಮಿಗಳಲ್ಲಿ ವಿವಿಧ ಸರ್ಕಾರಿ ಪ್ರಾಯೋಜಿತ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಔಪಚಾರಿಕ ಬ್ಯಾಂಕ್ ಸಾಲಗಳನ್ನು ಪಡೆಯಲು ಅನುಕೂಲ ಮಾಡಿಕೊಡುವುದು ಮತ್ತು ಗ್ರಾಹಕರ ದೂರುಗಳನ್ನು ಪರಿಹರಿಸುವುದು ಸಭೆಯ ಉದ್ದೇಶವಾಗಿತ್ತು. ಬ್ಯಾಂಕ್ ಸೇವೆಗಳನ್ನು ಪ್ರವೇಶಿಸುವಲ್ಲಿ ಉದ್ಯಮಿಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಉದ್ಯಮಿಗಳಿಂದ ನೇರ ಪ್ರತಿಕ್ರಿಯೆ ಪಡೆಯಲಾಯಿತು. 


ಕೇರಳ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯನ್ನು ಆರ್.ಬಿ.ಐ ಯ ಕೇರಳ ಮತ್ತು ಲಕ್ಷದ್ವೀಪ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್ ವಸಂತ ರಾಮಚಂದ್ರನ್ ಉದ್ಘಾಟಿಸಿದರು. ತ್ರಿಶೂರ್‍ನ ಎಂ.ಎಸ್.ಎಂ.ಇ. ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿಯ ಅಧಿಕಾರಿಗಳು ಎಂ.ಎಸ್.ಎಂ.ಇ. ವಲಯಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರಸ್ತುತಿ ನೀಡಿದರು. ಬಳಿಕ  ಸಂವಾದಾತ್ಮಕ ಅಧಿವೇಶನದಲ್ಲಿ, ಉದ್ಯಮಿಗಳಿಗೆ ಬ್ಯಾಂಕ್ ಸಾಲಗಳು, ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಗ್ರಾಹಕ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲಾಯಿತು. ಎಂ.ಎಸ್.ಎಂ.ಇ. ಮತ್ತು ಬ್ಯಾಂಕ್‍ಗಳ ಹಿರಿಯ ಕಾರ್ಯನಿರ್ವಾಹಕರು ಮತ್ತು ಸಂಬಂಧಪಟ್ಟ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಪ್ರಶ್ನೆಗಳಿಗೆ ಉತ್ತರಿಸಿ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

ಜಿಲ್ಲೆಯಾದ್ಯಂತ ಸುಮಾರು 100 ಎಂ.ಎಸ್.ಎಂ.ಇ. ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರ್‍ಬಿಐ ತಿರುವನಂತಪುರಂ ಜನರಲ್ ಮ್ಯಾನೇಜರ್ ಪಿ ಕೆ ಮೊಹಮ್ಮದ್ ಸಾಜಿದ್, ಎಸ್‍ಎಲ್‍ಬಿಸಿ ಕೇರಳ ಜನರಲ್ ಮ್ಯಾನೇಜರ್ ಮತ್ತು ಕನ್ವೀನರ್ ವಿ ಎಸ್ ಸಂತೋಷ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಾಸರಗೋಡು ಜನರಲ್ ಮ್ಯಾನೇಜರ್ ರಂಜಿತ್ ಬಾಬು ಮತ್ತು ಕೇರಳ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ ವಿ ಸುಗತನ್ ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಬ್ಯಾಂಕ್‍ಗಳ ಹಿರಿಯ ಕಾರ್ಯನಿರ್ವಾಹಕರು, ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries