ತಿರುವನಂತಪುರಂ: ವಿಶ್ವಕಪ್ ಫೈನಲ್ ಪಂದ್ಯದ ಕಾರಣ ಕೇರಳ ವಿಶ್ವವಿದ್ಯಾಲಯವು ಇಂದು ನಿಗದಿಯಾಗಿದ್ದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಪರಿಷ್ಕøತ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಅಧಿಕೃತರು ತಿಳಿಸಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದ ಕಾರಣ ರಾಜ್ಯದ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೂ ರಜೆ ಅನ್ವಯಿಸುತ್ತದೆ.
ವಿಶ್ವಕಪ್ ಫುಟ್ಬಾಲ್ ಫೈನಲ್ ಇಂದು ಬೆಳಿಗ್ಗೆ ಮುಕ್ತಾಯಗೊಂಡಿದೆ. ಆದರೆ ಮುಂಜಾನೆ ವರೆಗೂ ಪಂದ್ಯಾಟ ನಡೆದಿದ್ದರಿಂದ ರಜೆ ನೀಡಲಾಗಿದೆ. ಆದಾಗ್ಯೂ, ಮುಂಚಿತವಾಗಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸರ್ಕಾರಿ ಆದೇಶದಲ್ಲಿ ಹೇಳಲಾಗಿತ್ತು.

