ಕಾಸರಗೋಡು: ಕಾಸರಗೋಡು ಕ್ಷೇತ್ರದ ಮುಖಚರ್ಯೆಯನ್ನೇ ಬದಲಾಯಿಸುವ ಅಭಿವೃದ್ಧಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಕಲ್ಲಟ್ರ ಮಾಹಿನ್ ಹೇಳಿದರು. ಕಾಸರಗೋಡು ಕ್ಷೇತ್ರದ ಅಭಿವೃದ್ಧಿ ಸಮಸ್ಯೆಗಳು ಮತ್ತು ಚಟುವಟಿಕೆಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅಧ್ಯಕ್ಷತೆಯಲ್ಲಿ ಕಲೆಕ್ಟರೇಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡುತ್ತಿದ್ದರು.
ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕಾರಡ್ಕದಲ್ಲಿ ಮಾನವ-ವನ್ಯಜೀವಿ ಸಂಘರ್ಷ, ಚೆರ್ಕಳ ಜಾಲ್ಸೂರು ರಸ್ತೆ ಸೇರಿದಂತೆ ಪಿಡಬ್ಲ್ಯೂಡಿ ರಸ್ತೆಗಳ ಅಭಿವೃದ್ಧಿ, ವಿವಿಧ ಕುಟುಂಬ ಆರೋಗ್ಯ ಕೇಂದ್ರಗಳು ಮತ್ತು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ, ಚಂದ್ರಗಿರಿ ಮತ್ತು ಮೊಗ್ರಾಲ್ ನದಿಗಳ ರಕ್ಷಣೆ, ನೆಲ್ಲಿಕುನ್ನು ಬೀಚ್ ಪ್ರವಾಸೋದ್ಯಮ ಯೋಜನೆ, ಕಾಸರಗೋಡು ನಗರ ಅರಣ್ಯ, ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಅಭಿವೃದ್ಧಿ ಚಟುವಟಿಕೆಗಳು, ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಯೋಜನೆ ಕುರಿತು ಚರ್ಚಿಸಲಾಯಿತು. ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತಂದ ಮತ್ತು ಜಾರಿಗೆ ತರಲಿರುವ ಯೋಜನೆಗಳ ಕುರಿತು ಚರ್ಚಿಸಲಾಯಿತು. ಮಾಜಿ ಶಾಸಕರ ನಿಧಿಯನ್ನು ಬಳಸಿಕೊಂಡು ಮಾಡಿದ ಕಾರ್ಯಗಳು ಮತ್ತು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಜಾರಿಗೆ ತರಬೇಕಾದ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞÂ ಚೆರ್ಕಳ, ಸಿ. ಬಾಲನ್, ಕಾಸರಗೋಡು ನಗರಸಭೆ ಅಧ್ಯಕ್ಷೆ ಶಾಹಿನಾ ಸಲೀಂ, ಕಾಸರಗೋಡು ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಯೋಜನಾಧಿಕಾರಿ ಟಿ. ರಾಜೇಶ್, ಎಲ್ಎಸ್ಜಿಡಿ ಜಂಟಿ ನಿರ್ದೇಶಕ ಕೆ.ವಿ. ಹರಿದಾಸ್, ಕೆಡಿಪಿ ವಿಶೇಷ ಅಧಿಕಾರಿ ವಿ. ಚಂದ್ರನ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.



