HEALTH TIPS

ಉದ್ಯಾವರ | ವ್ಯಾಯಾಮ ಶಾಲೆಯ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಂಜೇಶ್ವರ : ಉದ್ಯಾವರ ಮಾಡ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಗೆ ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಹಣ ಕಳವು ಮಾಡಿ ಪರಾರಿಯಾಗಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.


ಶನಿವಾರ ಸಂಜೆ ನಡೆಯಲಿದ್ದ ವಿಶೇಷ ಪೂಜೆಯ ಸಿದ್ಧತೆಗಾಗಿ ವ್ಯಾಯಾಮ ಶಾಲೆಯ ಪದಾಧಿಕಾರಿಯೊಬ್ಬರು ಬೆಳಿಗ್ಗೆ 5 ಗಂಟೆ ಸುಮಾರಿಗೆ ಆಗಮಿಸಿದ ವೇಳೆ ಕಳವು ನಡೆದಿರುವುದು ಪತ್ತೆಯಾಗಿದೆ.

ಆರೋಪಿಗಳು ಕಬ್ಬಿಣದ ರಾಡ್‌ನಿಂದ ಮುಖ್ಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ನಗದು ಹಣವನ್ನು ದೋಚಿದ್ದಾರೆ. ಬಳಿಕ ಖಾಲಿ ಕಾಣಿಕೆ ಡಬ್ಬಿಯನ್ನು ವ್ಯಾಯಾಮ ಶಾಲೆಯ ಮುಂಭಾಗದ ಪೊದೆಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಸದಾನಂದ ರವರು ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries