ಮಂಜೇಶ್ವರ: ಅನಂತಶ್ರೀ ವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಜು. 29 ರಿಂದ ಸೆ.26ರ ತನಕ ಆನೆಗುಂದಿ ಪಡು ಕುತ್ಯಾರು ಸರಸ್ವತೀ ಪೀಠದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಶ್ರೀಗಳು ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಚಿತ್ತೈಸಿದರು. ಈ ವೇಳೆ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಕ್ಷೇತ್ರ ಆಡಳಿತ ಸಮಿತಿ, ಮಹಿಳಾ ಸಂಘ, ಓಜ ಸಾಹಿತ್ಯ ಕೂಟ, ಗುರುಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದರು.

-side.jpg)
