HEALTH TIPS

ಶ್ರೀಎಡನೀರು ಮಠಾಧೀಶರ ಚಾತುರ್ಮಾಸ್ಯ-ಇಂದು ಸಮಿತಿಗಳ ಮಹಾಸಭೆ

ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಷಷ್ಠ ಚಾತುರ್ಮಾಸ್ಯ ಜುಲೈ 29 ರಿಂದ ಸೆಪ್ಟೆಂಬರ್ 26ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಶ್ರೀಮಠದಲ್ಲಿ ನಡೆಯಲಿದೆ. ಒಟ್ಟು 60 ದಿನಗಳ ಈ ಪುಣ್ಯ ಕಾರ್ಯದಲ್ಲಿ  ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆಯು,  ಧಾರ್ಮಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ,  ಭಜನೆ,ಕಲೆ- ಸಾಹಿತ್ಯ, ಸಂಗೀತದ ಹಿರಿಯ ಕಿರಿಯ ಕಲಾವಿದರ  ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿದೆ.

ಈ ಸಂದರ್ಭ ಸಾವಿರಾರು ಭಕ್ತಾದಿಗಳ ಶ್ರೀಮಠ ಸಂದರ್ಶನ, ಆಗಮಿಸುವ ಭಕ್ತಾದಿಗಳಿಗಿರುವ ಪ್ರತಿದಿನದ  ಊಟೋಪಚಾರ, ವಸತಿ ವ್ಯವಸ್ಥೆಗಳೆಲ್ಲವೂ ಶ್ರೀ ಮಠದ ಶಿಷ್ಯವೃಂದದ ಸಹಕಾರದೊಂದಿಗೆ ನಡೆಸಬೇಕಾಗಿದೆ.  ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸುವ ನಿಟ್ಟಿನಲ್ಲಿ ಜುಲೈ 19 ಸಂಜೆ 5ಕ್ಕೆ ಶ್ರೀ ಎಡನೀರು ಮಠದಲ್ಲಿ  ಎಲ್ಲಾ ಸಮಿತಿಗಳ ಮಹಾಸಭೆ ನಡೆಯಲಿದ್ದು,  ಶಿಷ್ಯವೃಂದದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಎಡನೀರು ಶ್ರೀಗಳ ಚಾತುರ್ಮಾಸ್ಯ ಸಮಿತಿ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries