HEALTH TIPS

ಸಿಜೆಪಿ ಪ್ರತಿಭಟನೆ: ಹದಗೆಟ್ಟ ವಾಂಗ್ಚೂಕ್ ಆರೋಗ್ಯ

ನವದೆಹಲಿ: ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ನಿನ್ನೆ 13ನೇ ದಿನ ಪೂರ್ಣಗೊಳಿಸಿದೆ.

ಮತ್ತೊಂದೆಡೆ ಪ್ರತಿಭಟನೆ ಬೆಂಬಲಿಸಿ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರು ಕೈಗೊಂಡಿರುವ ಉಪವಾಸ ಸತ್ಯಾಗ್ರಹ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ.

'ಸೋನಮ್ ವಾಂಗ್ಚೂಕ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟ 60ಕ್ಕೆ ಇಳಿಕೆಯಾಗಿದೆ. ರಕ್ತದೊತ್ತಡವೂ ಕಡಿಮೆಯಾಗಿದೆ' ಎಂದು ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

'ವಾಂಗ್ಚೂಕ್ ಅವರಿಗೆ ಏನಾದರೂ ಸಂಭವಿಸಿದರೆ ಸರ್ಕಾರವೇ ಹೊಣೆ' ಎಂದು ಅವರು ಎಚ್ಚರಿಸಿದ್ದಾರೆ.

ಈ ನಡುವೆ ಧರಣಿಯನ್ನು ಮುಂದುವರಿಸುವ ಕುರಿತು ಪ್ರತಿಕ್ರಿಯೆ ಸಂಗ್ರಹಿಸಲು 'ಚಾಯ್ ಪೇ ಚರ್ಚಾ' ಪ್ರಾರಂಭಿಸಿದ್ದಾರೆ.

ನೀಟ್ ಸೇರಿದಂತೆ ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜೂನ್ 20ರಂದು ಸಿಜೆಪಿ ಪ್ರತಿಭಟನೆ ಆರಂಭಿಸಿತ್ತು. ಹೋರಾಟವನ್ನು ಮತ್ತಷ್ಟು ವಿಸ್ತರಿಸುವ ಕುರಿತಾಗಿಯೂ ಸಿಜೆಪಿ ಚಿಂತನೆ ನಡೆಸುತ್ತಿದೆ.

ಅಖಿಲ ಭಾರತ ವಿದ್ಯಾರ್ಥಿ ಅಸೋಸಿಯೇಷನ್‌ನ (ಎಐಎಸ್‌ಎ) ಆರು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries