HEALTH TIPS

ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ನಿಧನ

 ಮೈಸೂರು: ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ (ಕಳ್ಳಂಬೆಳ್ಳ ನರಸಿಂಹ ಮೂರ್ತಿ ಮುಕ್ತಾ) ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವಿವಾಹಿತೆಯಾಗಿದ್ದ ಸಿ.ಎನ್.ಮುಕ್ತಾ ಸೋದರ, ಸೋದರಿಯ ಸಹಿತ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. 


ಸರಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಅಧಿಕವಾಗಿ ವಿವಿಧೆಡೆ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು.

ಅವರ ಕಾದಂಬರಿಗಳಲ್ಲಿ ಸುಖದ ಸೋಪಾನ, ಕ್ಷಮಯಾ ಧರಿತ್ರಿ, ದಡ ಸೇರಿದ ನೌಕೆ, ಜೀವನಚಕ್ರ, ಅಮೃತಮಯಿ, ವಿಮುಕ್ತಿ ಪ್ರಸಿದ್ಧವಾದವು. ರಾಜ್ಯದ ಪ್ರಮುಖ ವಾರಪತ್ರಿಕೆಗಳಲ್ಲಿ ಅವರ ಕಾದಂಬರಿಗಳು ಧಾರಾವಾಹಿಯಾಗಿ ಪ್ರಕಟವಾಗಿವೆ. ಅಲ್ಲದೆ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ. ಅವರ ವಿಮುಕ್ತಿ ಕಾದಂಬರಿ ಆಧರಿಸಿ ರಾಜೇಂದ್ರ ಸಿಂಗ್ ಬಾಬು ಅವರು 'ದೋಣಿ ಸಾಗಲಿ' ಸಿನೆಮಾ ನಿರ್ದೇಶಿಸಿದ್ದರು. ಅಲ್ಲದೆ ಮೇಘ ಮಂದಾರ ಕಾದಂಬರಿ ಆಧರಿಸಿ

ಕೋಡ್ಲು ರಾಮಕೃಷ್ಣ ಅವರು 'ಮಿಸ್ ಕ್ಯಾಲಿಫೋರ್ನಿಯಾ' ಸಿನೆಮಾ ನಿರ್ದೇಶಿಸಿದ್ದರು.

ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ಅವರ ಅಂತಿಮ ದರ್ಶನವನ್ನು ಲಕ್ಷ್ಮಿಪುರಂನ ಆರ್.ಟಿ.ಓ ವೃತ್ತದ ಬಳಿಯ ಡಬಲ್ ಟ್ಯಾಂಕ್ ರಸ್ತೆ ಬದಿಯ ಅವರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries