ಮಂಜೇಶ್ವರ: ವಿಶ್ವದ ಜನತೆ ಫುಟ್ಬಾಲ್ ಪಂದ್ಯಾಟದಲ್ಲಿ ತಮ್ಮ ಗಮನ ಕೇಂದ್ರೀಕರಿಸುತ್ತರುವ ಮಧ್ಯೆ, ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಪ್ರೌಢಶಾಲೆಯಲ್ಲಿ ಒನ್ ಮಿಲಿಯನ್ ತೂಫಾನ್ ಗೋಲ್ ಕಾರ್ಯಕ್ರಮ ಆಯೋಜಿಸಲಾಯಿತು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಬಿ ಎ ಗೋಲು ಹೊಡೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲಕೃಷ್ಣ ಪಜ್ವ , ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಮೋಹನ ಬಿ, ಮುಖ್ಯ ಶಿಕ್ಷಕಿ ಕೃಷ್ಣವೇಣಿ ಬಿ, ದೈಹಿಕ ಶಿಕ್ಷಕರಾದ ಉದಯ್ ಮೊದಲಾದವರು ಉಪಸ್ಥಿತರಿದ್ದರು. ಅತಿಥಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಗೋಲು ಹೊಡೆಯುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.


