ಅಗರ್ತಲಾ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ ಅನುರಾಗ್ ಧನಕರ್ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧನಕರ್ ಅವರು 1994ರ ಬ್ಯಾಚ್ನ ಐಪಿಎಸ್ ಅಧಿಕಾರಿ. ಕಚೇರಿಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಅವರನ್ನು ಕೂಡಲೇ ಜಿ.ಬಿ. ಪಂತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ, ಧನಕರ್ ಅವರು ಆಸ್ಪತ್ರೆಗೆ ಕರೆತರುವ ಮೊದಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ
ಮುಖ್ಯಮಂತ್ರಿ ಮಾಣಿಕ್ ಸಾಹ ಹಾಗೂ ಮುಖ್ಯ ಕಾರ್ಯದರ್ಶಿ ಜೆ.ಕೆ. ಸಿನ್ಹಾ ಸೇರಿದಂತೆ ಉನ್ನತಾಧಿಕಾರಿಗಳು ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಧನಕರ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಆದಾಗ್ಯೂ, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

