ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಷಷ್ಠ ಚಾತುರ್ಮಾಸ್ಯ ವ್ರತಾಚರಣೆ ಜು. 29 ರಿಂದ ಸೆ. 26ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಈ ಸಂದರ್ಭ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ ಪತ್ರದ ಬಿಡುಗಡೆ ಶ್ರೀಮಠದಲ್ಲಿ ಬುಧವರ ನೆರವೇರಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮಹಿತಿ ಪತ್ರ ಬಿಡುಗಡೆಗೊಳಿಸಿದರು. ಶ್ರೀಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ಸೂರ್ಯನಾರಾಯಣ ಭಟ್, ಸತೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಚಾತುರ್ಮಾಸ್ಯ ವ್ರತಾಚರಣೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀಮಠದಲ್ಲಿಹಾಗೂ ವಿವಿಧ ಕೇಂದ್ರಗಳಲ್ಲಿ ಶಿಷ್ಯವೃಂದದ ಸಭೆ ಆಯೋಜಿಸಲಾಗುತ್ತಿದೆ.



