ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕಾರ, ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಂದರ್ಭ ಕನ್ನಡದಲ್ಲಿ ಮಾತನಾಡಿ, ಗಮನಸೆಳೆದಿದ್ದ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅವರು, ಕರ್ನಾಟಕ ಕೆಎಸ್ಸಾರ್ಟೀಸಿ ಬಸ್ಸಿನಲ್ಲಿ ಕಾಸರಗೋಡಿನ ಗಡಿನಾಡ ವಿದ್ಯಾರ್ಥಿಗಳಿಗೆ ಭಾಷಾ ಬೇಧವಿಲ್ಲದೇ ಉಚಿತ ಸಂಚಾರ ಸೌಲಭ್ಯ ಕಲ್ಪಿಸಿದ ಕರ್ನಾಟಕ ಸರ್ಕಾರಕ್ಕೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸುವ ಮೂಲಕ ತಮ್ಮ ಭಾಷಾ ಪ್ರೇಮ ಮೆರೆದಿದ್ದಾರೆ.
ಗಡಿನಾಡ ವಿದ್ಯಾರ್ಥಿಗಳ ಬಸ್ ಪ್ರಯಾಣದ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಎ.ಕೆ.ಎಂ ಅಶ್ರಫ್ ಅವರು, ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿಕೊಟ್ಟ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಕೇರಳಂ ವಿಧಾನಸಭೆಯ ವೇದಿಕೆಯಲ್ಲಿ ಹೃದಯದ ಭಾಷೆಯಲ್ಲಿ ತಮ್ಮ ಅಭಿನಂದನೆ ಸಲ್ಲಿಸಿದರು.
ಈ ಮಹತ್ವದ ತೀರ್ಮಾನದ ಹಿಂದೆ ಶ್ರಮಿಸಿದ ಎಐಸಿಸಿ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಪಾತ್ರವನ್ನೂ ಶಾಸಕರು ಶ್ಲಾಘಿಸಿದರು.
visit link
https://www.facebook.com/


