ನವದೆಹಲಿ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆ ಕುರಿತು ಯಾವುದೇ ರಾಜಿ ಇಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸರಕಾರಕ್ಕೆ ಸ್ಪಷ್ಟಪಡಿಸಿದೆ.
ಕೇಂದ್ರ ಸಚಿವ ಜೆಪಿ ನಡ್ಡಾ ಅವರೊಂದಿಗೆ ಸಿಜೆಪಿ ನಾಯಕರು ಎರಡನೇ ಸುತ್ತಿನ ಮಾತುಕತೆ ನಡೆಸಿದ್ದಾರೆ.
ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ನೇತೃತ್ವ ವಹಿಸಿರುವ ಸಿಜೆಪಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿದಂತೆ ಸರಕಾರ ತನ್ನ ಪ್ರತಿಕ್ರಿಯೆ ನೀಡಲು ಶನಿವಾರ ಮಧ್ಯಾಹ್ನದವರೆಗೆ ಸಮಯ ಕೋರಿದೆ ಎಂದು ಹೇಳಿಕೊಂಡಿದೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಎP ಪುನರುಚ್ಚರಿಸಿದೆ.

