HEALTH TIPS

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಗೆ SIT: ಸುಪ್ರೀಂಗೆ ಉ.ಪ್ರ. ಸರ್ಕಾರ

 ವದೆಹಲಿ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಕಳ್ಳತನ ಆರೋಪದ ತನಿಖೆಗಾಗಿ ಐಜಿಪಿ ಕಿರಣ್‌ ಎಸ್‌. ಅವರ ನೇತೃತ್ವದಲ್ಲಿ ನಾಲ್ಕು ಜನರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸೋಮವಾರ(ಜುಲೈ 27) ಮಾಹಿತಿ ನೀಡಿದೆ. 


ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೊಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ. ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಉತ್ತರ ಪ್ರದೇಶ ಸರ್ಕಾರವು ಎಸ್‌ಐಟಿ ರಚಿಸಿರುವ ಕುರಿತು ಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಐಜಿಪಿಯೊಂದಿಗೆ ಈ ತಂಡದಲ್ಲಿ ಡಿಜಿಐ ಶ್ರೇಣಿಯ ಅಧಿಕಾರಿ, ಹಿರಿಯ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಇರಲಿದ್ದಾರೆ ಎಂದು ತುಷಾರ್ ಮೆಹ್ತಾ, ಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಸುಪ್ರೀಂ ಕೋರ್ಟ್‌ ಸಲಹೆಯ ಮೇರೆಗೆ ಜುಲೈ 25ರಂದು ಹೊರಡಿಸಲಾದ ಅಧಿಸೂಚನೆಯ ಮೂಲಕ ಎಸ್‌ಐಟಿ ರಚಿಸಲಾಗಿದ್ದು, ಅದು ಎರಡು ವಾರಗಳಲ್ಲಿ ಪ್ರಾಥಮಿಕ ವರದಿಯನ್ನು ನೀಡಲಿದೆ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಪಾಡಲು ಬೇಕಾದ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಾವು ನ್ಯಾಯಯುತ, ತ್ವರಿತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸುವತ್ತ ಗಮನಹರಿಸಿದ್ದೇವೆ ಎಂದು ಸಿಜೆಐ ಹೇಳಿದ್ದಾರೆ.

ಎಸ್‌ಐಟಿ ತಂಡದಲ್ಲಿ ವಿಧಿವಿಜ್ಞಾನ ತಜ್ಞರನ್ನು ಸೇರ್ಪಡೆ ಮಾಡಲು ಪೀಠವು, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ರಾಮ ಮಂದಿರ ದೇಣಿಗೆ ಕಳ್ಳತನ ಆರೋಪದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಜುಲೈ 20ರಂದು ಸುಪ್ರೀಂ ಕೋರ್ಟ್‌, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries