ಪೆರ್ಲ : ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪೆರ್ಲ ಘಟಕ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆ. 30ರಂದು ಪೆರ್ಲ ವ್ಯಾಪಾರಿ ಭವನ ಸಭಾಂಗಣದಲ್ಲಿ ನಡೆಯಲಿರುವುದು.
ಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಹಿಳಾ ಸಂಘದವರಿಂದ ಭಜನೆ, 10ಕ್ಕೆ ಧಾರ್ಮಿಕ ಸಭೆ ಜರಗಲಿರುವುದು.ಈ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಗುರುತಿಸಿ ಕೊಂಡ ಸಮಾಜ ಭಾಂಧದವರಿಗೆ ಗೌರವಾರ್ಪಣೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮ ನಡೆಯುವುದು.
ಕಾರ್ಯಕ್ರಮದ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಸ್ಪರ್ಧೆಗಳು ಆ. 23ರಂದು ಇಡಿಯಡ್ಕ ಶ್ರೀ ದುರ್ಗಾ ಪರಮೇಶ್ವರಿ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲಾಗಿದ್ದು, ಎಲ್.ಪಿ, ಯು.ಪಿ, ಹೈಸ್ಕೂಲ್ ಅಲ್ಲದೆ ಸಾರ್ವಜನಿಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿರುವುದು.

