HEALTH TIPS

ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲು 4 ಮನೆಗಳು ನೀರುಪಾಲು ಭೀತಿಯಲ್ಲಿ

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾಯತಿಯ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಈ ರಸ್ತೆ ಸಂಪೂರ್ಣ ನೀರುಪಾಲಾದರೆ ಈ ಪ್ರದೇಶದ ನೆಬಿನ್, ಇಬ್ರಾಹಿಂ, ಅನಿಲ್, ಆನಂದ ಎಂಬವರ ಮನೆಗೂ ಅಪಾಯವುಂಟಾಗಲಿದೆ. ಕಳೆದೆರಡು ದಿನಗಳಿಂದ ಈ ಪರಿಸರದಲ್ಲಿ ಕಡಲ್ಕೊರೆತ ಹೆಚ್ಚಾಗಿದೆ. ಶಾರದಾನಗರದಲ್ಲಿ ಶಶಿಕಲರ ಮನೆ ನೀರುಪಾಲಾಗಿದ್ದು, ಇಲ್ಲಿನ ಲಲಿತ, ನಿವೇದಿತ, ಗಿರಿಜ ಎಂಬವರ ಮನೆಗಳು ಅಪಾಯದಂಚಿನಲ್ಲಿದೆ. ಇವರನ್ನು ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ನಾಶನಷ್ಟಗೊಂಡ ಕುಟುಂಬಗಳಿಗೆ ಪರಿಹಾರ ಕ್ರಮ ಕೂಡಲೇ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries