ಮಂಜೇಶ್ವರ: ಮೀಯಪದವು ಮಾಸ್ಟರ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಮಾಜಿ ಸದಸ್ಯ ಕೆ.ವಿ. ರಾಧಾಕೃಷ್ಣ ಭಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜ ಗೀತೆ, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗೀತೆಗಳನ್ನು ಹಾಡಲಾಯಿತು. ಬಳಿಕ ಕ್ಲಬ್ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅವರು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ದೇಶದ ಏಕತೆ, ದೇಶಭಕ್ತಿ ಹಾಗೂ ನಾಗರಿಕರ ಜವಾಬ್ದಾರಿಯ ಮಹತ್ವವನ್ನು ಅವರು ತಮ್ಮ ಭಾಷಣದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದು, ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

.jpg)
