ಸಮರಸ ಚಿತ್ರಸುದ್ದಿ: ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಪ್ರಧಾನ ತಂತ್ರಿವರ್ಯ ಕಂಠರರ್ ಮಹೇಶ್ ಮೋಹನರ್ ಅವರ ನೇತೃತ್ವ ಹಗೂ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಶ್ರೀಮಠದಲ್ಲಿ ಮಹಾಶ್ರೀ ಚಕ್ರ ನವಾವರಣ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಎಡನೀರುಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದಿವ್ಯ ಉಪಸ್ಥಿತರಿದ್ದರು.


