ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಮಹಾಶ್ರೀಚಕ್ರ ನವಾವರಣ ಪೂಜಾ ಮಹೋತ್ಸವ ನಡೆಯಿತು.
ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಪ್ರಧಾನ ತಂತ್ರಿವರ್ಯ ಕಂಠರರ್ ಮಹೇಶ್ ಮೋಹನರ್ ಅವರ ನೇತೃತ್ವದಲ್ಲಿ ಮಹಾಶ್ರೀಚಕ್ರ ನವಾವರಣ ಪೂಜೆ ಆಯೋಜಿಸಲಾಗಿತ್ತು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮಹಾಶ್ರೀಚಕ್ರ ನವಾವರಣ ಪೂಜೆಗೆ ಚಾಲನೆ ನೀಡಿದರು. ಇದೇ ಸಂದರ್ಭ ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮ ಮತ್ತುವೀಣಾವಾದಿನಿ ತಂಡದಿಂದ ನವಾವರಣ ಕೃತಿ ಆಲಾಪನಾ ಕಾರ್ಯಕ್ರಮ ಜರಗಿತು.



