ನವದೆಹಲಿ: 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ನಾಗರಿಕರು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ(ಆ.9) ಮನವಿ ಮಾಡಿದ್ದಾರೆ.
2022ರಲ್ಲಿ 'ಆಜಾದಿ ಕಾ ಅಮೃತ ಮಹೋತ್ಸವ'ದ ಅಡಿಯಲ್ಲಿ ಪ್ರಾರಂಭವಾದ 'ಹರ್ ಘರ್ ತಿರಂಗಾ' ಅಭಿಯಾನವು ನಂತರದ ವರ್ಷಗಳ ಸ್ವಾತಂತ್ರ್ಯ ದಿನಾಚರಣೆಯಂದು ಮುಂದುವರೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 'ತ್ರಿವರ್ಣ ಧ್ವಜವು ನಮ್ಮ ಹೆಮ್ಮೆ. ದೇಶಕ್ಕಾಗಿ ಕೊಡುಗೆ ನೀಡಲು ಇದು ನಿರಂತರ ಪ್ರೇರಣೆಯಾಗಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳೋಣ. ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ನಮ್ಮ ಸಾಮೂಹಿಕ ಸಂಕಲ್ಪವನ್ನು ಪುನರುಜ್ಜೀವನಗೊಳಿಸೋಣ' ಎಂದಿದ್ದಾರೆ.
2026ರ 'ಹರ್ ಘರ್ ತಿರಂಗಾ' ಅಭಿಯಾನಕ್ಕೆ ಆಗಸ್ಟ್ 6ರಂದು ಚಾಲನೆ ನೀಡಲಾಗಿದ್ದು, ಆಗಸ್ಟ್ 9ರಿಂದ 17ರವರೆಗೆ ದೇಶದಾದ್ಯಂತ ಆಚರಿಸಲಾಗುತ್ತದೆ. ಈ ವೇಳೆ ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮತ್ತು ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಆಚರಿಸುವ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಲಾಗುತ್ತದೆ.

