ನವದೆಹಲಿ: ಕೇರಳದಲ್ಲಿ ಮಳೆ ಬಿರುಗಾಳಿಯ ಬಗ್ಗೆ ಪ್ರಿಯಾಂಕಾ ಗಾಂಧಿ ದುಃಖ ವ್ಯಕ್ತಪಡಿಸಿದರು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಿಯಾಂಕಾ ಟ್ವಿಟರ್ನಲ್ಲಿ ತಮ್ಮ ಆಳವಾದ ಸಂತಾಪ ವ್ಯಕ್ತಪಡಿಸುವುದಾಗಿ ಬರೆದಿದ್ದಾರೆ.
ಕಾಣೆಯಾದವರ ಸುರಕ್ಷಿತ ಮರಳುವಿಕೆ ಮತ್ತು ಗಾಯಾಳುಗಳ ತ್ವರಿತ ಚೇತರಿಕೆಗಾಗಿ ಪ್ರಾರ್ಥಿಸುವುದಾಗಿ ಪ್ರಿಯಾಂಕಾ ಹೇಳಿದರು. ಎಲ್ಲಾ ಕಾಂಗ್ರೆಸ್ ಮತ್ತು ಯುಡಿಎಫ್ ಕಾರ್ಯಕರ್ತರು ಸಂತ್ರಸ್ತರೊಂದಿಗೆ ನಿಂತು ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಿಯಾಂಕಾ ಹೇಳಿರುವರು.
ಇದಕ್ಕೂ ಮೊದಲು, ರಾಹುಲ್ ಗಾಂಧಿ ಕೂಡ ಈ ವಿಷಯಕ್ಕೆ ಪ್ರತಿಕ್ರಿಯಿಸಿದರು. ಕೇರಳದಾದ್ಯಂತ ಭಾರೀ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ತಮ್ಮ ತೀವ್ರ ದುಃಖವನ್ನು ವ್ಯಕ್ತಪಡಿಸುವುದಾಗಿ ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಬರೆದಿದ್ದಾರೆ.
ಪ್ರಾಣ ಕಳೆದುಕೊಂಡ ಎಂಟು ಜನರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದರು. ಕಾಣೆಯಾದವರು ಸುರಕ್ಷಿತವಾಗಿರಲಿ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಅವರು ಹೇಳಿರುವರು.
ಪರಿಹಾರ ಕಾರ್ಯಗಳಲ್ಲಿ ಸಮನ್ವಯ ಸಾಧಿಸಲು ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. ರಕ್ಷಣಾ ಕಾರ್ಯಾಚರಣೆಗಳಲ್ಲಿ ಮುಂದಾಳತ್ವ ವಹಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಗುಡ್ಡಗಾಡು ಪ್ರದೇಶಗಳಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.

